ನೂತನ ಸರ್ಕಾರ ಬಂದ ಬೆನ್ನಲ್ಲೆ ರಾಜ್ಯ 214 ಕೈದಿಗಳು ರಿಲೀಸ್

This Article Written by / Malenadu Today / ಮೇ 22, 2023

KARNATAKA NEWS/ ONLINE / Malenadu today/ May 22, 2023 SHIVAMOGGA NEWS

ಬೆಂಗಳೂರು/ ನೂತನ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬರುತ್ತಲೇ ಬೆನ್ನಿಂದ ಬೆನ್ನಿಗೆ ಹೊಸ ಹೊಸ ಆದೇಶಗಳು ಹೊರಕ್ಕೆ ಬರುತ್ತಿವೆ. ಇದಕ್ಕೆ ಪೂರಕವಾಗಿ ರಾಜ್ಯದ ವಿವಿಧ ಜೈಲಿನಲ್ಲಿರುವ 214 ಕೈದಿಗಳ ಬಿಡುಗಡೆಗೆ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. 

ಪ್ರಕಟಣೆಯಲ್ಲಿ ಏನಿದೆ ಓದಿ

ವಿಷಯ : ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ ಜೀವಾವಧಿ ಶಿಕ್ಷಾ ಬಂದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡುವ ಬಗ್ಗೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ ಒಟ್ಟು 214 ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆಗೊಳಿಸಿ, ಸರ್ಕಾರವು ಉಲ್ಲೇಖಿತ ಆದೇಶವನ್ನು ಹೊರಡಿಸಿರುತ್ತದೆ 

ಉಲ್ಲೇಖಿತ ಸರ್ಕಾರದ ಆದೇಶದನ್ವಯ, ಸದರಿ ಜೀವಾವಧಿ ಶಿಕ್ಷಾ ಬಂದಿಗಳನ್ನು ನಿಯಮಾನುಸಾರ ಅವಧಿಪೂರ್ವ ಬಿಡುಗಡೆ ಮಾಡುವ ಸಂಬಂಧ, ತಕ್ಷಣ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದೆ. ಈ ಕುರಿತು ಕೈಗೊಂಡ ಕ್ರಮದ ಬಗ್ಗೆ ಈ ಕಛೇರಿಗೆ ಹಾಗೂ ಸಂಬಂಧಪಟ್ಟವರಿಗೆ ತಪ್ಪದೇ ಮಾಹಿತಿ / ವರದಿಯನ್ನು ಸಲ್ಲಿಸತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

 

ಮುಂದಿನ ಸುದ್ದಿ ಒದಿ

Leave a Comment