SAGARA

2 ತಿಂಗಳಿಂದ ಸಾಗರ ಕಾಗೋಡು ನಿವಾಸಿ ನಾಪತ್ತೆ! ಕೈ ಮೇಲಿದೆ ದಿವ್ಯ ಹೆಸರಿನ ಹಚ್ಚೆ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Sagara Taluk / ಮಲೆನಾಡು ಟುಡೆ ಸುದ್ದಿ / ಸಾಗರ / ಸಾಗರ ತಾಲ್ಲೂಕಿನ ಕಾಗೋಡು ಗ್ರಾಮದ ನಿವಾಸಿಯೊಬ್ಬರು ಕಳೆದ ಎರಡು ತಿಂಗಳುಗಳಿಂದ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಸಾರ್ವಜನಿಕರು ನೆರವು ನೀಡುವಂತೆ ಪೊಲೀಸ್ ಇಲಾಖೆಯು ಪ್ರಕಟಣೆಯ ಮೂಲಕ ಮನವಿ ಮಾಡಿದೆ.

ಕಾಗೋಡು ಗ್ರಾಮದಲ್ಲಿ ವಾಸವಾಗಿರುವ ರೇಣುಕಮ್ಮ ಎಂಬುವವರ 40 ವರ್ಷ ವಯಸ್ಸಿನ ಮಗ ಗಿರೀಶ್ ನಾಪತ್ತೆಯಾಗಿರುವ ವ್ಯಕ್ತಿ. ಮಾನಸಿಕ ಅಸ್ವಸ್ಥರಾಗಿರುವ ಇವರು 5.8 ಅಡಿ ಎತ್ತರವಿದ್ದು, ಕೋಲು ಮುಖ, ಸಾಧಾರಣ ಮೈಕಟ್ಟು ಹಾಗೂ ಎಣ್ಣೆಗೆಂಪು ಮೈಬಣ್ಣ ಹೊಂದಿದ್ದಾರೆ. ಎಡಗೈನ ಮೇಲೆ ‘ದಿವ್ಯ’ ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. ಈ ವ್ಯಕ್ತಿಯ ಕುರಿತು ಮಾಹಿತಿ ಅಥವಾ ಸುಳಿವು ದೊರೆತಲ್ಲಿ ತಕ್ಷಣವೇ ಪೊಲೀಸ್ ಇಲಾಖೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಸಾರ್ವಜನಿಕರು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆಗಳಾದ 9480803361 ಅಥವಾ 9480803385 ಸಂಪರ್ಕಿಸಬಹುದು. ಅದೇ ರೀತಿ ಸಾಗರ ವಿಭಾಗದ ಕಚೇರಿ 08182-226082 ಅಥವಾ ಶಿವಮೊಗ್ಗ ಎಸ್.ಪಿ ಕಚೇರಿಯ 08182-261400 ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಇಲಾಖೆಯು ವಿನಂತಿಸಿದೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ