ತೀರ್ಥಹಳ್ಳಿ ಬಸವಾನಿ ಕಾಡಿನಲ್ಲಿ 9 ಕ್ಲಾಸ್ ವಿದ್ಯಾರ್ಥಿನಿ ಶವ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆ

Shivamogga | Jan 30, 2024 |  Thirthahalli Basavani  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಬಸವಾನಿ ಸಮೀಪ 9 ತರಗತಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಕಾಡಿನಲ್ಲಿ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ ಲಿಮಿಟ್ಸ್​ ನಲ್ಲಿ ಘಟನೆ ನಡೆದಿದೆ. 

ತೀರ್ಥಹಳ್ಳಿ ಪೊಲೀಸ್ ಸ್ಟೇಷನ್

ತೀರ್ಥಹಳ್ಳಿ ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಓದುತ್ತಿದ್ದಳು. ಮೂಲಗಳ ಪ್ರಕಾರ, ಈಕೆ ಶಾಲೆಗೆ ಕೆಲವು ದಿನಗಳಿಂದ ಹೋಗಿರಲಿಲ್ಲ ಎನ್ನಲಾಗುತ್ತಿದೆ. ನಿನ್ನೆ ಸೋಮವಾರ ಸಮೀಪದ ಪ್ಲಾಂಟೇಷನ್​ ಕಾಡಿನಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. 

ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿದ್ದು, ಸಾವಿನ ಕಾರಣ ಮತ್ತು ಘಟನೆಯ ವಿವರ ಇನ್ನಷ್ಟೆ ತನಿಖೆ ನಡೆದು ತಿಳಿಯಬೇಕಿದೆ. ಸದ್ಯ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸ್ತಿದ್ದಾರೆ. ವಿದ್ಯಾರ್ಥಿನಿಯ ವೈಯಕ್ತಿಕ ವಿವರವನ್ನು ಗೌಪ್ಯವಾಗಿ ಇಡಲಾಗಿದೆ.  


Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು