ಡಿಸಿಸಿ ಬ್ಯಾಂಕ್ನಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಆರ್ಎಂ ಮಂಜುನಾಥ್ ಗೌಡರನ್ನ ಇಡಿ ಅರೆಸ್ಟ್ ಮಾಡಿದೆ. ಈ ಮಧ್ಯೆ ಮಂಜುನಾಥ್ ಗೌಡರಿಗೆ ಮತ್ತೊಂದು ಪ್ರತಿಕೂಲ ಸುದ್ದಿ ಎದುರಾಗಿದೆ.
ಇಡಿ ಅಥವಾ ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸುವ ಸಂದರ್ಭದಲ್ಲಿ ಅನುಸರಿಸಿದ ಕಾರ್ಯ ವಿಧಾನ ಸರಿಯಲ್ಲ ಎಂದು ಪ್ರಶ್ನಿಸಿ ಹೈಕೋರ್ಟ್ಗೆ ಅವರು ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
rm manjunath gowda
ಜಾರಿ ನಿರ್ದೇಶನಾಲಯ ಬಂಧಿಸುವ ಸಂದರ್ಭದಲ್ಲಿ ಅನುಸರಿಸಿದ ಕಾರ್ಯವಿಧಾನವನ್ನು ಪ್ರಶ್ನಿಸಿ ಆರ್ಎಂಎಂ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನರವರ ಪೀಠ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.
ಈ ವೇಳೆ ಅಂತಿಮವಾಗಿ, ಅರ್ಜಿದಾರರಿಗೆ ಬಂಧನಕ್ಕೆ ನೀಡಿರುವ ಪ್ರತಿ ಕಾರಣಗಳನ್ನು ಪರಿಶೀಲಿಸುವುದು ಹಾಗೂ ವಿಶ್ಲೇಷಣೆ ಮಾಡಲು ಹೈಕೋರ್ಟ್ಗೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.