Sunday, 27 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAYSTATE NEWS

naxalism :  ಮುಂಡಗಾರು ಲತಾ ಸೇರಿದಂತೆ 04 ಜನ ನಕ್ಸಲ್​ ಮುಖಂಡರ ಪ್ರಕರಣ ಖುಲಾಸೆ

prathapa thirthahalli
Last updated: May 24, 2025 1:50 pm
Prathapa thirthahalli - content producer
Share
SHARE

naxalism :  ಮುಂಡಗಾರು ಲತಾ ಸೇರಿದಂತೆ 04 ಜನ ನಕ್ಸಲ್​ ಮುಖಂಡರ ಪ್ರಕರಣ ಖುಲಾಸೆ

naxalism :  ಕೆಲ ತಿಂಗಳ ಹಿಂದಷ್ಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ  ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲ್ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಪ್ರಕರಣಗಳನ್ನು ಖುಲಾಸೆ ಮಾಡಿ ನಗರದ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. 

ಇದು ರಾಜ್ಯ ಸರ್ಕಾರ ನಕ್ಸಲರ ಶರಣಾಗತಿ ಸಂದರ್ಭದಲ್ಲಿ ನೀಡಿದ್ದ ತ್ವರಿತ ವಿಚಾರಣೆಯ ಭರವಸೆ ಈಡೇರಿದಂತಾಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಬೇಕೆಂದು ಸರ್ಕಾರ ನಕ್ಲಲ್ ಶರಣಾಗತಿ ಸಮಿತಿಯನ್ನು ರಚಿಸಿತ್ತು. ಅದರಂತೆ ಸಮಿತಿ ಸದಸ್ಯರು ನಕ್ಸಲರನ್ನು ಕಾಡಿನಲ್ಲಿ ಭೇಟಿ ಮಾಡಿ ಅವರ ಮನವೊಲಿಸುವ ಪ್ರಯತ್ನದಲ್ಲಿ ಯಶಸ್ವಿಯಾಗಿತ್ತು. ನಂತರ ಮುಂಡಗಾರು ಲತಾ ಸೇರಿದಂತೆ ಮೂವರು ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಣಾಗಿತ್ತು. ಇವರುಗಳ ವಿರುದ್ಧ ಹಲವು ಕೇಸ್ ಗಳು ದಾಖಲಾಗಿದ್ದವು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

naxalism : ಶೃಂಗೇರಿಯ ಬುಕ್ಕಡಿಬೈಲು ಬಸ್ ನಿಲ್ದಾಣದ ಅಂಗಡಿಯೊಂದರ ಗೋಡೆ ಮೇಲೆ ಲತಾ, ರವೀಂದ್ರ ಮತ್ತು ಸಾವಿತ್ರಿ ಅವರು ಕರಪತ್ರಗಳನ್ನು ಅಂಟಿಸಿ, ಸರ್ಕಾರಿ ವಿರೋಧಿ ಘೋಷಣೆ ಕೂಗಿದ್ದರು ಎಂದು ಶೃಂಗೇರಿ ಪೊಲೀಸ್ ಠಾಣೆಯಲ್ಲಿ 2009ರಲ್ಲಿಯು ಎಪಿಎ ಪ್ರಕರಣ ದಾಖಲಿಸಲಾಗಿತ್ತು. 2005 ರಲ್ಲಿ ಲೇವಾದೇವಿ ವ್ಯವಹಾರ ನಡೆಸುತ್ತಿದ್ದ ಗಂಗಾಧರ ಶೆಟ್ಟಿ ಎಂಬುವವರ ಬೈಕ್ ಸುಟ್ಟ ಆರೋಪವೂ ಈ ಮೂವರ ಮೇಲಿತ್ತು. ಲತಾ, ರವೀಂದ್ರ ಮತ್ತು ವನಜಾಕ್ಷಿ ಅವರು ಶೃಂಗೇರಿ ತಾಲ್ಲೂಕಿನ ನೆಮ್ಮಾರಿನಲ್ಲಿ ಮತ್ತು ಮಾವೋವಾದಿ ಪರ ಘೋಷಣೆ ಕೂಗಿದ್ದ ಆರೋಪದಲ್ಲಿಯೂ ಎಫ್ ಐಆರ್ ದಾಖಲಿಸಲಾಗಿತ್ತು. 2018ರಲ್ಲಿ ಥಣಿಕೋಡು ಅರಣ್ಯ ಚೆಕ್ ಪೋಸ್ಟ್ನಲ್ಲಿ ಸ್ಪೋಟಕಗಳನ್ನು ಎಸೆದು ದಾಖಲೆಗಳನ್ನು ಸುಟ್ಟು ರೂ.34,000 ನಷ್ಟ ಉಂಟು ಮಾಡಿದ್ದರು ಎಂದು ಮತ್ತೊಂದು ಯುಎಪಿಎ ಪ್ರಕರಣವೂ ಇವರ ವಿರುದ್ಧ ದಾಖಲಿಸಲಾಗಿತ್ತು.

car decor
NES Head Office, Balaraja Urs Road, Shivamogga

ನಗರದ ಯುಎಪಿಎ ಪ್ರಕರಣ ವಿಶೇಷ ನ್ಯಾಯಾಲಯವು ಇವರುಗಳ ವಿರುದ್ಧ ದಾಖಲಾಗಿದ್ದ  ಪ್ರಕರಣಗಳ ವಿಚಾರಣೆ ನಡೆಸಿತ್ತು. ತೀರ್ಪು ನೀಡಿದ ನ್ಯಾಯಾಧೀಶ ಸಿ.ಎಂ. ಗಂಗಾಧರ ಅವರು ಈ ಎಲ್ಲ ಪ್ರಕರಣಗಳಲ್ಲಿ, ಈ ನಾಲ್ವರೇ ಅಪರಾಧ ಎಸಗಿದ್ದಾರೆ ಎನ್ನುವುದನ್ನು ಸಾಬೀತುಪಡಿಸುವಲ್ಲಿ ತನಿಖಾಧಿಕಾರಿಗಳು ವಿಫಲರಾಗಿದ್ದಾರೆ.ಆದ್ದರಿಂದ ಇವರ ವಿರುದ್ಧ ಯುಎಪಿಎ ಮತ್ತು ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ದಾಖಲಿಸಿರುವ ಪ್ರಕರಣಗಳನ್ನು ವಜಾ ಮಾಡಬಹುದಾಗಿದೆ ಎಂದು ಅಭಿಪ್ರಾಯಪಟ್ಟು ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ವಕೀಲ ಶಿವಮಣಿಧನ್ ವಾದ ಮಂಡಿಸಿದ್ದರು.

malenadutoday add
TAGGED:naxalism
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Holliday tomorrow heavy rain : ವಾರಕ್ಕೂ ಮೊದೆಲೆ ಕೇರಳಕ್ಕೆ ಮಾನ್ಸೂನ್​ ಆಗಮನ | ಎಲ್ಲೆಲ್ಲಿ ಹೆಚ್ಚು ಮಳೆ ಆಗಲಿದೆ
Next Article karnataka police karnataka police : ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಭತ್ಯೆ ಹೆಚ್ಚಳ | ರಾಜ್ಯ ಸರ್ಕಾರ ಆದೇಶ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಗೃಹಲಕ್ಷ್ಮೀ ಯೋಜನೆಯಿಂದ ಬಂದ  ಹಣದಿಂದ ಹೈನುಗಾರಿಕೆ ಪ್ರಾರಂಭಿಸಿದ ಮಹಿಳೆ

By 131

ಭಗೀರಥ ಸಹಕಾರ ಸಂಘ ಉದ್ಘಾಟನೆಗೆ ದಿನಾಂಕ ಫಿಕ್ಸ್‌ | ಷೇರಿನ ದರ ಎಷ್ಟು? ಯಾವೆಲ್ಲಾ ಸಾಲ ಕೊಡುತ್ತಾರೆ?

By 13
SHIVAMOGGA NEWS TODAY

ಫೆಬ್ರವರಿ 18 ರಂದು ಉಡುತಡಿ ನಾಟಕ ಪ್ರದರ್ಶನ, ಕೃತಿ ಬಿಡುಗಡೆ

By 131
Shikaripura accident
SHIVAMOGGA NEWS TODAY

accident today : ಜುಲೈ 01  ಬೇಗುವಳ್ಳಿಯಲ್ಲಿ ಭೀಕರ ಅಪಘಾತ, ಓರ್ವ ಮಹಿಳೆ ಸಾವು 

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up