youth congress protest shivamogga : ರಸಗೊಬ್ಬರಗಳ ಬೆಲೆ ಹೆಚ್ಚಳ | ಕೇಂದ್ರ ಸರ್ಕಾರದ ವಿರುದ್ದ ಯುವ ಕಾಂಗ್ರೆಸ್ ಪ್ರತಿಭಟನೆ
youth congress protest shivamogga : ರೈತರು ಬೆಳೆಗಳಿಗೆ ವಿತರಿಸುವ ರಸ ಗೊಬ್ಬರಗಳ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಆರೋಪಿಸಿ ಇಂದು ಕೃಷಿ ಇಲಾಖೆ ಕಚೇರಿಯ ಎದುರು ಯುವ ಕಾಂಗ್ರೆಸ್ ಗ್ರಾಮಾಂತರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಆರಂಭದಿಂದಲೂ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಲೇ ಬಂದಿದೆ. ಇದೀಗ ರೈತರ ಬೆಳೆಗಳಿಗೆ ವಿತರಿಸುವ ರಾಸಾಯನಿಕ ರಸಗೊಬ್ಬರಗಳ ಬೆಲೆಯನ್ನು ಹೆಚ್ಚಳ ಮಾಡಿದೆ. , ಕಳೆದ ವರ್ಷ ಇಫ್ಕೋ 15-15-15 ರಸಗೊಬ್ಬರದ ಬೆಲೆ 1250 ರೂಪಾಯಿ ಇತ್ತು. ಅದನ್ನು ಈ ವರ್ಷ 1650 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಅದೇ ರೀತಿ ಆರ್.ಸಿ.ಎಫ್. 15-15-15ರ ಬೆಲೆ 1470 ರೂ.ಗಳಿದ್ದದ್ದು, ಈ ವರ್ಷ 1650 ರೂ.ಗಳಾಗಿದೆ. ಹೀಗೆ ರೈತರು ಬೆಳೆಗಳಿಗೆ ವಿತರಿಸುವ ಅನೇಕ ಗೊಬ್ಬರಗಳ ಮೇಲೆ ಕೇಂದ್ರದ ಬಿಜೆಪಿ ಸರ್ಕಾರ ಬೆಲೆ ಹೆಚ್ಚಳ ಮಾಡಿದ್ದು, ರೈತರ ಮೇಲೆ ಗದಾಪ್ರಹಾರ ಮಾಡುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.
youth congress protest shivamogga : ಕೇಂದ್ರ ಬಿಜೆಪಿ ಸರ್ಕಾರ ಒಂದೆಡೆ ರೈತರಿಗೆ ಕಿಸಾನ್ ಸಮ್ಮಾನ್ ಎಂದು ವರ್ಷಕ್ಕೆ 4 ಸಾವಿರ ರೂ.ಗಳನ್ನು ನೀಡಿ, ಹಿಂಬಾಗಿಲಿನಿಂದ ಗೊಬ್ಬರ, ಔಷಧಿ, ಬಿತ್ತನೆ ಬೀಜಗಳ ಬೆಲೆ ಏರಿಕೆ ಮಾಡುವ ಮೂಲಕ ಅದಕ್ಕಿಂತ ದುಪ್ಪಟ್ಟು ಹಣವನ್ನು ರೈತರಿಂದ ವಸೂಲು ಮಾಡುತ್ತಿದೆ.ಕೇಂದ್ರದ ಬಿಜೆಪಿ ಸರ್ಕಾರ ಈ ರೀತಿ ಏಕಾಏಕಿ ಅವೈಜ್ಞಾನಿಕವಾಗಿ ರಸಗೊಬ್ಬರಗಳ ಬೆಲೆ ಏರಿಕೆ ಮಾಡಿದರೆ, ಮೊದಲೇ ಸಂಕಷ್ಟದಲ್ಲಿರುವ ರೈತರು ಮತ್ತಷ್ಟು ಸಂಕಷ್ಟಕ್ಕೊಳಗಾಗಲಿದ್ದಾರೆ ಎಂದರು.

ಕೇಂದ್ರ ಸರ್ಕಾರ ರಸಗೊಬ್ಬರಗಳ ಬೆಲೆ ಇಳಿಕೆ ಮಾಡದಿದ್ದಲ್ಲಿ ಯುವ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ. ಆದ್ದರಿಂದ ಕೂಡಲೇ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ, ಕೇಂದ್ರ ಸರ್ಕಾರ ಹೆಚ್ಚಳ ಮಾಡಿರುವ ರಸಗೊಬ್ಬರಗಳ ಬೆಲೆಯನ್ನು ಇಳಿಕೆ ಮಾಡುವಂತೆ ಸೂಕ್ತ ನಿರ್ದೇಶನ ಮಾಡಬೇಕೆಂದು ಯುವ ಕಾಂಗ್ರೆಸ್ ಒತ್ತಾಯಿಸಿದೆ.
youth congress protest shivamogga : ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಹಾಪ್ ಕಾಮ್ಸ್ ಅಧ್ಯಕ್ಷರಾದ ವಿಜಯ್ ಕುಮಾರ್ , ಹಾಲಪ್ಪ, ಶಿವಾನಂದ್, ಕಿಸಾನ್ ಸೆಲ್ ಕಾರ್ಯಾಧ್ಯಕ್ಷರಾದ ಗಿರೀಶ್, ಯುವ ಮುಖಂಡರಾದ ಮಧುಸೂದನ್, ಚೇತನ್, ನಜಮ್ , ಇಮ್ರಾನ್, ನೂರು, NSUI ರಾಜ್ಯ ಕಾರ್ಯದರ್ಶಿ ಬಾಲಾಜಿ , ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಹರ್ಷಿತ್, ಗ್ರಾಮಾಂತರ ಯುವ ಕಾಂಗ್ರೆಸ್ ನ ಅಧ್ಯಕ್ಷ ಪ್ರವೀಣ್, ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಚರಣ್, ಕಾರ್ಯಕರ್ತರು ಪಾಲ್ಗೊಂಡಿದ್ದರು.