Wednesday, 20 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAYPOLITICS

nsui shivamogga ಜುಲೈ 03 : ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿರುವ ದೇಶಭಕ್ತಿ ಗೀತೆ ಸ್ಪರ್ಧೆಗೆ NSUI ಆಕ್ಷೇಪ : ಕಾರ್ಯಕ್ರಮ ನಡೆಸದಂತೆ ಸಚಿವರಿಗೆ ಮನವಿ

prathapa thirthahalli
Last updated: July 3, 2025 1:49 pm
Prathapa thirthahalli - content producer
Share
SHARE

nsui shivamogga  : ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿರುವ ದೇಶಭಕ್ತಿ ಗೀತೆ ಸ್ಪರ್ಧೆಗೆ NSUI ಆಕ್ಷೇಪ : ಕಾರ್ಯಕ್ರಮ ನಡೆಸದಂತೆ ಸಚಿವರಿಗೆ ಮನವಿ

ಜುಲೈ 19 ರಂದು  ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಹಾಗೂ ಮಂಥನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ ಆಯೋಜಿಸಿದೆ. ಇದು ಯುವಜನತೆಯಲ್ಲಿ ರಾಜಕೀಯ-ಕೋಮು ದ್ವೇಷ ಭಾವನೆ ಮೂಡಿಸುವ ಉದ್ದೇಶದಿಂದ ಆಯೋಜಿಸಿದ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮಕ್ಕೆ ಕಾಲೇಜಿನ ವಿದ್ಯಾರ್ಥಿಗಳನ್ನು ಕಳುಹಿಸಬಾರದೆಂದು ಎನ್​ಎಸ್​ಯುಐ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ ಸಲ್ಲಿಸಿದೆ.

ಕೆ.ಎಸ್. ಈಶ್ವರಪ್ಪನವರರು 1975ರ ತುರ್ತು ಪರಿಸ್ಥಿತಿಯ ಕರಾಳ ನೆನಪಿನ 50ನೇ ವರ್ಷದ ಅಂಗವಾಗಿ 2025ರ ಜುಲೈ 19ರಂದು ಶಿವಮೊಗ್ಗ ನಗರದ ಮಟ್ಟದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ ಆಯೋಜಿಸಿದ್ದು, ಈ ಕಾರ್ಯಕ್ರಮ ಯುವಜನತೆಯಲ್ಲಿ ರಾಜಕೀಯ-ಕೋಮು ದ್ವೇಷ ಭಾವನೆ ಮೂಡಿಸುವ ಉದ್ದೇಶದಿಂದ ಆಯೋಜಿಸದ ಕಾರ್ಯಕ್ರಮವಾಗಿದೆ ಎಂದು ಎನ್​ಎಸ್​ಯುಐ ಆರೋಪಿಸಿದೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈಶ್ವರಪ್ಪನವರು ಬಿಜೆಪಿಯಲ್ಲಿದ್ದಾಗ ಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿದ್ದರಿಂದಾಗಿ ಬಿಜೆಪಿ ಈಶ್ವರಪ್ಪನವರಿಗೆ  ಟಿಕೆಟ್ ನೀಡದೇ ರಾಜಕೀಯವಾಗಿ ಮೂಲೆಗುಂಪು ಮಾಡಿದೆ.  ತಮ್ಮ ರಾಜಕೀಯ ಜೀವನ ಮುಗಿದ ಅಧ್ಯಾಯ ಎಂದು ಗೊತ್ತಿದ್ದರೂ ತಮ್ಮ ಮಗನನ್ನು ರಾಜಕೀಯದಲ್ಲಿ ನೆಲೆಯೂರಿಸುವ ಉದ್ದೇಶದಿಂದ ಕೆ.ಎಸ್.ಈಶ್ವರಪ್ಪನವರು ಈಗ ದೇಶಭಕ್ತಿಯ ನಾಟಕವಾಡುತ್ತಿದ್ದು, ಅದಕ್ಕೆ ವಿದ್ಯಾರ್ಥಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎನ್​ಎಸ್​ಯುಐ ಆರೋಪಿಸಿದೆ.

nsui shivamogga  : ದೇಶದ ಬಗ್ಗೆ ಕಾಳಜಿ ಇದ್ದರೆ ಗೋದ್ರಾ ಹತ್ಯಾಕಾಂಡ ನೆನೆಪಿಸಿಕೊಳ್ಳಿ 

ಇದೀಗ ರಾಜಕೀಯವಾಗಿ ಬಿಜೆಪಿಯಿಂದ ಹೊರಹಾಕಲ್ಪಟ್ಟಿರುವ ಈಶ್ವರಪ್ಪನವರು ಬಿಜೆಪಿ ವರಿಷ್ಟರನ್ನು ಓಲೈಕೆ ಮಾಡಲು ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಸರಿಯಲ್ಲ. ಇಂದಿರಾ ಗಾಂಧಿಯವರು ದೇಶದ ಅಂದಿನ ಆರ್ಥಿಕ-ರಾಜಕೀಯ ಪರಿಸ್ಥಿತಿಯನ್ನಾಧರಿಸಿ ತುರ್ತು ಪರಿಸ್ಥಿತಿ ಹೇರಿಕೆ ಮಾಡಿದ್ದರು. ಆದರೆ, ಈಶ್ವರಪ್ಪ ತಮ್ಮ ರಾಜಕೀಯ ತೆವಲಿಗೋಸ್ಕರ ವಿದ್ಯಾರ್ಥಿಗಳಿಗೆ ‘ತುರ್ತು ಪರಿಸ್ಥಿತಿಯ ಕರಾಳ ನೆನಪು’ ಎಂದು ಹೇಳುತ್ತಾ ಇಂತಹ ಕಾರ್ಯಕ್ರಮ ಆಯೋಜಿಸಿ ವಿದ್ಯಾರ್ಥಿಗಳನ್ನು ದುರ್ಬಳಕೆ ಮಾಡಿಕೊಂಡು ಅವರಲ್ಲಿ ರಾಜಕೀಯ-ಕೋಮು ಪ್ರಚೋದನಾ ಭಾವನೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಈಶ್ವರಪ್ಪನವರಿಗೆ ಈ ದೇಶದ ಬಗ್ಗೆ ನೈಜ ಕಾಳಜಿ ಇದ್ದರೆ, ಗೋದ್ರಾ ಹತ್ಯಾಕಾಂಡದಲ್ಲಿ ನಡೆದ ಸಾವಿರಾರು ಜನರ ಮಾರಣಹೋಮವನ್ನು ನೆನಪು ಮಾಡಿಕೊಳ್ಳಲಿ. ರಾಜಕೀಯ ಉದ್ದೇಶಕ್ಕಾಗಿ ಮಕ್ಕಳ ಜೀವನದ ಜೊತೆ ಚೆಲ್ಲಾಟವಾಡುವುದು ಬೇಡ ಎಂದರು.

nsui shivamogga  : ವಿದ್ಯಾರ್ಥಿಗಳನ್ನು ಕಳುಹಿಸದಂತೆ ಮನವಿ

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಇಂತಹ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸದಂತೆ ಆದೇಶ ಮಾಡಲು ನಿರ್ದೇಶನ ನೀಡಬೇಕು. ಮತ್ತು ಇಂತಹ ಕಾರ್ಯಕ್ರಮಗಳು ಕೆ.ಎಸ್. ಈಶ್ವರಪ್ಪ ಮತ್ತು ಅವರ ಕುಟುಂಬದ ಒಡೆತನದ ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಿದ್ದರೂ ರದ್ದುಪಡಿಸುವಂತೆ ಸೂಚನೆ ನೀಡಬೇಕೆಂದು ಈ ಮೂಲಕ ಶಿವಮೊಗ್ಗ ಎನ್.ಎಸ್.ಯು.ಐ. ಘಟಕದ ವತಿಯಿಂದ ಮನವಿ ಮಾಡುತ್ತಿದ್ದೇವೆ ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್  ಸಮಿತಿಯ  ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ರವರು, ಹಾಗೂ NSUI ನಗರ ಅಧ್ಯಕ್ಷ ರವಿ HL, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್, ವರುಣ್ ವಿ ಪಂಡಿತ್,ಜೀವನ್, ನಗರ ಪ್ರಧಾನ ಕಾರ್ಯದರ್ಶಿ ಆದಿತ್ಯ, ಸುಭಾನ್, ಸಾಗರ್, ನಂದೀಶ್, ಶ್ರೀಕಾಂತ್, ಮಂಜು, ಚಂದು ಸಚಿವರಿಗೆ ಮನವಿ ಸಲ್ಲಿಸಿದರು.

 

m srikanth
TAGGED:NSUI Shivamogga
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Threat case suicide in sagara ಜುಲೈ 03:  ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
Next Article thirthahalli news ನೀರಿನಲ್ಲಿ ಕೊಚ್ಚಿಹೋಗಿ ಮೃತಪಟ್ಟಿರುವ ವ್ಯಕ್ತಿ thirthahalli news ಜುಲೈ 03 ಮೇಗರವಳ್ಳಿಯಲ್ಲಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಸಾವು
1 Comment
  • Pingback: Shivamogga july 22: ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಬೇಡ: ಶಿವಮೊಗ್ಗದಲ್ಲಿ ವಿಶೇಷ ಬಹಿರಂಗ ಸಭೆ : ಕೆಎಸ್​ ಈಶ್ವರಪ

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ಶಿವಮೊಗ್ಗ ಸಿಟಿ ಲಾಡ್ಜ್‌ಗಳಿಗೆ ಪೊಲೀಸ್‌ ಅಧಿಕಾರಿಗಳ ಸರ್‌ಪ್ರೈಸ್‌ ವಿಸಿಟ್‌ | ಏನಿದು ವಿಶೇಷ

By 13
Security instructions 
SHIVAMOGGA NEWS TODAY

ಲಾಡ್ಜ್​​ ಹಾಗೂ ಕಲ್ಯಾಣ ಮಂಟಪಗಳ ಮಾಲಿಕರ ಜೊತೆ ಪೊಲೀಸರ ವಿಶೇಷ ಸಭೆ :  ಕಾರಣವೇನು

By Prathapa thirthahalli
police trekking
SHIVAMOGGA NEWS TODAY

police trekking 10 ಕ್ಕೂ ಹೆಚ್ಚು ಜನ ಪೊಲೀಸರಿಂದ ಆಪರೇಶನ್​ ಟ್ರೆಕ್ಕಿಂಗ್​

By Prathapa thirthahalli
ಲಿಂಗನಮಕ್ಕಿ ಜಲಾಶಯ
SHIVAMOGGA NEWS TODAY

ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಇವತ್ತು

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up