ಹಲ್ಲು ಮುರಿದಿದ್ದಕ್ಕೆ ಕಂಪ್ಲೆಂಟ್​ : ಏನಿದು ಸುದ್ದಿ

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

police complaint : ಹಲ್ಲು ಮುರಿದಿದ್ದಕ್ಕೆ ಕಂಪ್ಲೆಂಟ್​ : ಏನಿದು ಸುದ್ದಿ

ಶಿವಮೊಗ್ಗ :  ಕಳೆದ ವಾರ ಜುಲೈ 24 ರಂದು ಆನಂದಪುರ ಸಮೀಪದ ಮುಂಬಾಲ್ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ, ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಆರೋಪಿಸಿ ಪ್ರಯಾಣಿಕರೊಬ್ಬರು ದೂರು ದಾಖಲಿಸಿದ್ದಾರೆ. ಈ ಅಪಘಾತದಲ್ಲಿ ತಮ್ಮ 12 ಹಲ್ಲುಗಳು ಮುರಿದಿವೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

police complaint ಅಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದರು. ಇದೀಗ ಗಾಯಾಳು ಪ್ರಯಾಣಿಕರೊಬ್ಬರು ಆನಂದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಸ್ ಚಾಲಕ ಅತಿ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಸ್ ಚಲಾಯಿಸಿ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಇತರೆ ಪ್ರಯಾಣಿಕರು ತಮ್ಮ ಮೇಲೆ ಬಿದ್ದ ಪರಿಣಾಮ ತಮ್ಮ 12 ಹಲ್ಲುಗಳು ಮುರಿದು ಹೋಗಿವೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಅಪಘಾತಕ್ಕೆ ಕಾರಣನಾದ ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ. ಆನಂದಪುರ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Mumbaal Road accident ಬಸ್ ಹಾಗೂ ಲಾರಿ ನಡುವೆ ಅಪಘಾತ
Mumbaal Road accident ಬಸ್ ಹಾಗೂ ಲಾರಿ ನಡುವೆ ಅಪಘಾತ

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor