ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಚಾಲಕನ ಮೇಲೆ ಹಲ್ಲೆ : ಏನಿದು ಪ್ರಕರಣ

prathapa thirthahalli
Prathapa thirthahalli - content producer

Kumsi police station ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Kumsi police station ಎಫ್​ಐಆರ್​​ ನಲ್ಲಿ ಏನಿದೆ

ಆಗಸ್ಟ್ 1 ರಂದು ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಒಬ್ಬ ಮಹಿಳೆ ಪ್ರಯಾಣಿಸುತ್ತಿದ್ದರು. ಅವರು ಕಂಡಕ್ಟರ್ ಬಳಿ ಚೋರಡಿ ಸ್ಟಾಪ್‌ನಲ್ಲಿ ನಿಲ್ಲಿಸುವಂತೆ ಕೇಳಿದಾಗ, ಕಂಡಕ್ಟರ್ ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಆದರೆ, ನಂತರ ಚೋರಡಿ ಬಳಿ ಬಸ್ ನಿಲ್ಲಿಸಿ ಆ ಮಹಿಳೆಯನ್ನು ಇಳಿಸಲಾಗಿದೆ.

ಈ ಘಟನೆಯ ಮರುದಿನವೂ ಅದೇ ಮಹಿಳೆ ಅದೇ ಬಸ್ ಹತ್ತಿ ಚೋರಡಿ ಸ್ಟಾಪ್‌ನಲ್ಲಿ ಇಳಿದಿದ್ದಾರೆ. ಆಗ ಅಲ್ಲಿ ಕಾಯುತ್ತಿದ್ದ 10-15 ಜನರ ಗುಂಪೊಂದು ಬಸ್ ಚಾಲಕನನ್ನು ಹೊರಗೆ ಎಳೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ ನಮ್ಮ ಊರಿನವರಿಗೆ ಬಸ್​ ಏಕೆ ನಿಲ್ಲಿಸುವುದಿಲ್ಲ ಎಂದು ಹಲ್ಲೆ ಮಾಡಿದ್ದಾರೆ ಎಂಬುವುದಾಗಿ ಎಫ್‌ಐಆರ್‌ನಲ್ಲಿ ವಿವರಿಸಲಾಗಿದೆ. ಈ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಚಾಲಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ, ಚಾಲಕ ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

 

Share This Article