50 ಲಕ್ಷ ಹಣಕ್ಕಾಗಿ ಬೆದರಿಕೆ: ಮನೆ ಮತ್ತು ಅಂಗಡಿ ವಸ್ತುಗಳ ನಾಶ: ಏನಿದು ಪ್ರಕರಣ

This Article Written by / Prathapa thirthahalli / ಆಗಷ್ಟ್ 6, 2025

Lightning Strike Trading advertisement Current shock : Rippon pete Dasara Sports cyber crimeThreat case

Threat case ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದಲ್ಲಿ ಗುಜುರಿ ವ್ಯಾಪಾರಿಯೊಬ್ಬರಿಗೆ  50 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿ, ಮನೆಯ ಹಾಗೂ ಅಂಗಡಿಯ ವಸ್ತುಗಳನ್ನು ನಾಶಪಡಿಸಿದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Threat case : ಎಫ್​ಐಆರ್​ನಲ್ಲಿ ಏನಿದೆ

ಆರ್.ಎಂ.ಎಲ್. ನಗರ ನಿವಾಸಿಯಾಗಿರುವ ಗುಜುರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ಕುಳಿತಿದ್ದಾಗ, ಸುಮಾರು 5-6 ಯುವಕರು ಬಂದು ಅವರ ಅಣ್ಣನೊಂದಿಗೆ ಮಾತನಾಡಲು ಫೋನ್ ನೀಡಿದ್ದಾರೆ. ಫೋನ್ ತೆಗೆದುಕೊಂಡು ಮಾತನಾಡಿದಾಗ, ಆ ವ್ಯಕ್ತಿ ನನಗೆ ನೀನು  50 ಲಕ್ಷ ಹಣ ನೀಡಬೇಕು. ಇಲ್ಲವಾದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹಣ ನೀಡಲು ನಿರಾಕರಿಸಿದ ನಂತರ, ಅದೇ ರಾತ್ರಿ ಯುವಕರು ಮತ್ತೆ ಮನೆಗೆ ಬಂದು ಜಗಳ ಮಾಡಿ, ದೂರುದಾರರ ಅಳಿಯನಿಗೂ ಬೆದರಿಕೆ ಹಾಕಿದ್ದಾರೆ. ಇದರಿಂದ ಹೆದರಿದ ದೂರುದಾರರು ತಮ್ಮ ಸಂಬಂಧಿಕರ ಮನೆಗೆ ಹೋಗಿ ಉಳಿದುಕೊಂಡಿದ್ದಾರೆ. ಮರುದಿನ ನೆರೆಮನೆಯವರು ಕರೆ ಮಾಡಿ, ಅವರ ಮನೆಯ ವಸ್ತುಗಳನ್ನು ಹಾಳು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಮನೆಗೆ ಬಂದು ನೋಡಿದಾಗ 50 ಸಾವಿರ ಮೌಲ್ಯದ ವಸ್ತುಗಳನ್ನು ಹಾಳು ಮಾಡಿರುವುದು ಕಂಡುಬಂದಿದೆ.

ಇದಲ್ಲದೆ, ದೂರುದಾರರ ಅಳಿಯನ ಅಂಗಡಿಯ ಬಳಿಯೂ ಹೋಗಿ, ಹಣ ಕೊಡುವವರೆಗೂ ಅಂಗಡಿಯನ್ನು ತೆರೆಯಲು ಬಿಡುವುದಿಲ್ಲ ಎಂದು ಹೇಳಿ, ಡೆಸ್ಕ್‌ಟಾಪ್ ಸೇರಿದಂತೆ ಇತರ ವಸ್ತುಗಳನ್ನು ಹಾನಿ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment