ಸ್ವಾತಂತ್ರ್ಯ ದಿನಾಚರಣೆ ಚಂದಾ ವಿಚಾರ: ಆಟೋ ಚಾಲಕನ ಮೇಲೆ ಹಲ್ಲೆ, ದೂರು ದಾಖಲು

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

Attack on auto driver : ಶಿವಮೊಗ್ಗ: ಸ್ವಾತಂತ್ರ್ಯ ದಿನಾಚರಣೆ ಆಚರಣೆಗಾಗಿ ಚಂದಾ ನೀಡಲಿಲ್ಲ ಎಂಬ ಕಾರಣಕ್ಕೆ ಕೆಲವು ಯುವಕರು ಆಟೋ ಚಾಲಕರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆಗೆಂದು ಹೊಸ ಆಟೋ ಚಾಲಕರಿಂದ 2 ಸಾವಿರ ರೂ. ಹಾಗೂ ಹಳೆಯ ಆಟೋ ಚಾಲಕರಿಂದ 500 ರೂ. ವಸೂಲಿ ಮಾಡುತ್ತಿದ್ದ ಯುವಕರ ಗುಂಪು, ದೂರುದಾರನ ಬಳಿಯೂ 500 ರೂ. ನೀಡುವಂತೆ ಕೇಳಿದ್ದಾರೆ.

ಆದರೆ, ಚಾಲಕ ಹಣ ನೀಡಲು ನಿರಾಕರಿಸಿದಾಗ, ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಘಟನೆಯಿಂದ ಭಯಗೊಂಡ ಚಾಲಕ ಕೊನೆಗೆ ಹಣ ನೀಡಿ, ನಂತರ ದೊಡ್ಡಪೇಟೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಈ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Attack on auto driver

 

 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor