Tuesday, 26 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • INFORMATION NEWS
  • NATIONAL NEWS
  • Uncategorized
  • SHIMOGA NEWS LIVE
  • DISTRICT
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಸೆಪ್ಟಂಬರ್​ 06 ರಂದು ಶಿವಮೊಗ್ಗನಗರದಲ್ಲಿ ಸಂಚಾರ ಬದಲಾವಣೆ : ಕಾರಣವೇನು

prathapa thirthahalli
Last updated: August 26, 2025 11:21 am
Prathapa thirthahalli - content producer
Share
SHARE

Traffic Diversion ಸೆಪ್ಟೆಂಬರ್ 6, 2025 ರಂದು ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯ ಹಿನ್ನೆಲೆಯಲ್ಲಿ ನಗರದ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಈ ಕುರಿತು ಪೊಲೀಸ್ ಅಧೀಕ್ಷಕರು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಅಂದು ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿದೆ.

ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್. ಸರ್ಕಲ್, ಎ.ಎ. ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ, ಮಹಾವೀರ ಸರ್ಕಲ್, ಡಿ.ವಿ.ಎಸ್. ಸರ್ಕಲ್, ಕಾನ್ವೆಂಟ್ ರಸ್ತೆ, ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಬಳಿ ಇರುವ ತುಂಗಾ ನದಿಯಲ್ಲಿ ವಿಸರ್ಜನೆಗೊಳ್ಳಲಿದೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

Traffic Diversion ಸಂಚಾರ ನಿಷೇಧ ಮತ್ತು ಮಾರ್ಗ ಬದಲಾವಣೆ ವಿವರಗಳು:

ಮೆರವಣಿಗೆ ಮಾರ್ಗ ಮತ್ತು ಅದರ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಬೆಂಗಳೂರು, ಭದ್ರಾವತಿ, ಎನ್.ಆರ್. ಪುರ ಮತ್ತು ಚಿತ್ರದುರ್ಗ-ಹೊಳೆಹೊನ್ನೂರಿನಿಂದ ಬರುವ ಎಲ್ಲಾ ಭಾರಿ ವಾಹನಗಳು, ಬಸ್ಸುಗಳು ಮತ್ತು ಕಾರುಗಳು ಎಂ.ಆರ್.ಎಸ್. ಸರ್ಕಲ್‌ನಿಂದ ಬೈಪಾಸ್ ರಸ್ತೆ ಮೂಲಕ ಸಂಚರಿಸಬೇಕು.

ಹೊನ್ನಾಳಿ, ಹರಿಹರ ಮತ್ತು ದಾವಣಗೆರೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್ಸುಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂ.ಆರ್.ಎಸ್. ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮೂಲಕ ಹೋಗಬೇಕು.

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಕಡೆಗೆ ಹೋಗುವ ಬಸ್ಸುಗಳು ಮತ್ತು ಭಾರಿ ಸರಕು ವಾಹನಗಳು ಸಾಗರ ರಸ್ತೆ, ಹೆಲಿಪ್ಯಾಡ್ ಸರ್ಕಲ್, ಅಯ್ಯೋಳ ಸರ್ಕಲ್, ಪೊಲೀಸ್ ಚೌಕಿ, ರಾಜ್‌ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಮಾರ್ಗವಾಗಿ ಸವಳಂಗ ರಸ್ತೆ ಮೂಲಕ ಸಂಚರಿಸಬೇಕು.

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು ಮತ್ತು ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ, ಎಂ.ಆರ್.ಎಸ್. ಸರ್ಕಲ್ ಮೂಲಕ ಹೋಗಬೇಕು.

ಶಿಕಾರಿಪುರ, ಸೊರಬ ಮತ್ತು ಆನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೋಗುವ ಬಸ್ಸುಗಳು ಹಾಗೂ ಭಾರಿ ವಾಹನಗಳು ಉಷಾ ನರ್ಸಿಂಗ್ ಹೋಮ್ ಸರ್ಕಲ್, ಲಕ್ಷ್ಮಿ ಟಾಕೀಸ್ ಸರ್ಕಲ್, ಪೊಲೀಸ್ ಚೌಕಿ, ಅಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸಬೇಕು.

ಕೋಟೆ ರಸ್ತೆ ಮತ್ತು ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

Traffic Diversion  ಪೊಲೀಸ್ ವಾಹನಗಳು, ವಿಐಪಿ ವಾಹನಗಳು, ಆಂಬುಲೆನ್ಸ್ ಮತ್ತು ಮೂಲಭೂತ ಸೌಕರ್ಯ ಒದಗಿಸುವ ವಾಹನಗಳಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ. 

Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article ಆಗುಂಬೆ ರಸ್ತೆಯಲ್ಲಿ ಬ್ಯಾರಿಕೇಡ್‌ಗೆ ಬೈಕ್ ಡಿಕ್ಕಿ, ವ್ಯಕ್ತಿ ಗಂಭೀರ
Next Article Ganesha chaturthi ಗಣಪತಿ ಹಬ್ಬಕ್ಕೆ  ಸಿದ್ದತೆ ಜೋರು: ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ
Leave a Comment

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ಏಪ್ರಿಲ್‌ 10 ರಿಂದ 12 ರ ವರೆಗೆ ನೋನಿಯ ಸಂಶೋಧನಾ ಪ್ರವೃತ್ತಿಗಳು ಕುರಿತು ಅಂತರಾಷ್ಟ್ರೀಯ ಸಮ್ಮೇಳನ

By 131
Tirupati Chikkamagaluru Express
SHIVAMOGGA NEWS TODAY

Tirupati Chikkamagaluru Express july 12, ತಿರುಪತಿ-ಚಿಕ್ಕಮಗಳೂರು ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ : ಭಕ್ತಾದಿಗಳಿಗೆ ಸುಲಭ ಸಂಚಾರ !

By Prathapa thirthahalli
Chikkamagaluru accident ಕಾರು ಮತ್ತು ಟ್ಯಾಂಕರ್​ ನಡುವೆ ಅಪಘಾತ
SHIVAMOGGA NEWS TODAYDISTRICT

ಕಡೂರು ಬಳಿ ಕಾರು-ಟ್ಯಾಂಕರ್ ನಡುವೆ ಡಿಕ್ಕಿ , ಕಾರು ಚಾಲಕ ಸ್ಥಳದಲ್ಲೇ ಸಾವು

By Prathapa thirthahalli
Old electricity poles
SHIVAMOGGA NEWS TODAY

ಹಳೆಯ ವಿದ್ಯುತ್ ಕಂಬ ತೆರವಿಗೆ ಒತ್ತಾಯ: ಜಿಲ್ಲಾಧಿಕಾರಿಗೆ ಮನವಿ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up