ಗಣಪತಿ ಹಬ್ಬಕ್ಕೆ  ಸಿದ್ದತೆ ಜೋರು: ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ

Ganesha chaturthi : ಶಿವಮೊಗ್ಗ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬಕ್ಕೆ ಸಿದ್ದತೆ ಜೋರಾಗಿದೆ. ಹಬ್ಬದ ಆಚರಣೆಗಾಗಿ ಅಗತ್ಯ ವಸ್ತುಗಳನ್ನು ಖರೀದಿಸಲು ಶಿವಮೊಗ್ಗದ ಗಾಂಧಿ ಬಜಾರ್‌ ಸೇರಿದಂತೆ ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ಜನರು ಮುಗಿಬಿದ್ದಿದ್ದಾರೆ. ದೂರದ ಊರುಗಳಿಂದ ತಮ್ಮ ಸ್ವಂತ ಊರುಗಳಿಗೆ ಬಂದಿರುವ ಜನರಿಂದಾಗಿ ನಗರದಲ್ಲಿ ಟ್ರಾಫಿಕ್ ಜಾಮ್ ಸಹ ಹೆಚ್ಚಾಗಿದ್ದು, ಹಬ್ಬದ ಮೆರುಗು ಮತ್ತಷ್ಟು ಹೆಚ್ಚಿಸಿದೆ.

Shivamogga Malenadu Today
ಗಾಂಧಿ ಬಜಾರ್​ನಲ್ಲಿ ವ್ಯಾಪಾರದಲ್ಲಿ ನಿರತರಾದ ಜನ

ಗಾಂಧಿ ಬಜಾರ್‌ನಲ್ಲಿ ಮಾವು, ಹಲಸು, ಬಾಳೆ ಎಲೆ, ವೀಳ್ಯದೆಲೆ, ತೆಂಗಿನಕಾಯಿ ಸೇರಿದಂತೆ ವಿವಿಧ ಬಗೆಯ ಹಣ್ಣುಗಳು ಮತ್ತು ಪೂಜಾ ಸಾಮಗ್ರಿಗಳನ್ನು ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಈ ವೇಳೆ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಮತ್ತು ಗ್ರಾಹಕರ ನಡುವೆ ಚೌಕಾಸಿ ಮಾತುಕತೆಗಳು ಸಾಮಾನ್ಯವಾಗಿ ಕೇಳಿಬರುತ್ತಿದ್ದವು. ಅದಕ್ಕೆ ಕಾರಣವೆಂದರೆ, ಕಳೆದ ವರ್ಷಕ್ಕಿಂತಲೂ ಸಹ ಈ ಬಾರಿ ಹಬ್ಬಕ್ಕೆ  ಬೇಕಾದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದ್ದು, 10 ರೂಪಾಯಿಗೆ 3 ಬಾಲೆ ಎಲೆ 40 ರೂಪಾಯಿಗೆ 40 ವೀಲ್ಯದೆಲೆ, 50 ರೂಪಾಯಿಗೆ ಒಂದು ತೆಂಗಿನ ಕಾಯಿ ಸೇರಿದಂತೆ ಇತರೆ  ಹಣ್ಣು, ಮತ್ತು ಪೂಜಾ ಸಾಮಗ್ರಿಗಳ ಬೆಲೆಗಳು ತುಟ್ಟಿಯಾಗಿವೆ. ಇನ್ನು ಹೂವುಗಳ ವಿಚಾರದಲ್ಲಿ ನೋಡುವುದಾದರೆ ಮಲ್ಲಿಗೆ ಮಾರು ₹300, ಕನಕಾಂಬರ ಮಾರು ₹200, ಸೇವಂತಿಗೆ ಕೆ.ಜಿ.ಗೆ ₹350, ಒಂದು ಗುಲಾಬಿ ₹30 ಮತ್ತು ಸುಗಂಧರಾಜ ಹಾರ ₹300ಕ್ಕೆ ಮಾರಾಟವಾಗುತ್ತಿವೆ.

Shivamogga Malenadu Today

ಜನರು ಹೆಚ್ಚಿದ್ದರಿಂದ ಪೊಲೀಸರು ಈ  ಸಂದರ್ಭದಲ್ಲಿ  ವ್ಯಾಪಾರದ ಸ್ಥಳಗಳಲ್ಲಿ ಚೆಕ್ಕಿಂಗ್​ ಗೆ ಕಾರ್ಯವನ್ನು ಸಹ ನಡೆಸುತ್ತಿದ್ದರು. ಅಲ್ಲಿ ಶ್ವಾನದಳ ಆಗಮಿಸಿತ್ತು ಸುತ್ತಾ ಮುತ್ತಾ ಪರಿಶೀಲನೆ ನಡೆಸುತ್ತಿತ್ತು

Shivamogga Malenadu Today

Ganesha chaturthi ಸೈನ್ಸ್​ ಮೈದಾನದಲ್ಲಿ ಗಣೇಶ ಮೂರ್ತಿಗಳ ಭರಾಟೆ

Ganesha chaturthi ಗಾಂಧಿ ಬಜಾರ್ ಸೇರಿದಂತೆ ನಗರದ ಇತರ ಮಾರುಕಟ್ಟೆಗಳಲ್ಲಿ ಪೂಜಾ ಸಾಮಗ್ರಿ ವ್ಯಾಪಾರ ನಡೆಯುತ್ತಿದ್ದರೆ, ನಗರದ ಸೈನ್ಸ್ ಮೈದಾನವು ಗೌರಿ ಮತ್ತು ಗಣೇಶ ಮೂರ್ತಿಗಳ ಖರೀದಿ ಭರಾಟೆ ಹೆಚ್ಚಿತ್ತು. ನೂರಾರು ಗಣೇಶ ವ್ಯಾಪಾರಿಗಳ ಅಂಗಡಿಗಳು ಸೈನ್ಸ್​ ಮೈದಾನದಲ್ಲಿ ತುಂಬಿ ಹೋಗಿದ್ದವು.ಒಂದು ಅಡಿಯಿಂದ ಆರು ಅಡಿಯವರೆಗಿನ ವಿವಿಧ ಭಂಗಿಗಳಲ್ಲಿರುವ ಗಣೇಶ ಮೂರ್ತಿಗಳು ಇಲ್ಲಿ ಲಭ್ಯವಿದ್ದು, ಆಗಲೇ ಬುಕ್ ಆಗಿದ್ದ ಕೆಲವು ಮೂರ್ತಿಗಳನ್ನು ಬಟ್ಟೆಯಿಂದ ಮುಚ್ಚಿಡಲಾಗಿತ್ತು. ಜನರು ತಮ್ಮ ವಾಹನಗಳಲ್ಲಿ ಬಂದು ತಾವು ಇಷ್ಟಪಟ್ಟ ಗೌರಿ ಹಾಗೂ ಗಣೇಶ ಮೂರ್ತಿಗಳನ್ನು ಕೊಂಡೊಯ್ದರು.

Shivamogga Malenadu Today

Shivamogga Malenadu Today

ಅನೇಕ ವಿಧದ ಗಣಪತಿಗಳು ಇಲ್ಲಿವೆ. ಇಲ್ಲಿರುವ ಗಣೇಶನ ಬೆಲೆ 2.500 ರೂಪಾಯಿಯಿಂದ ಶುರುವಾಗಿ 25 ಸಾವಿರದ ವರೆಗೆ ಇದೆ. ಮೂರು ಅಡಿಗೆ 8ರಿಂದ10 ಸಾವಿರ ರೂಪಾಯಿ ಇದ್ದು. ಈ ಬಾರಿ ಗಣೇಶನ ಅಂಗಡಿಗಳು ಹೆಚ್ಚಾಗಿ ವ್ಯಾಪಾರ ಕಡಿಮೆ ಇದೆ. ಕುಂಸಿ, ಹಾರನಹಳ್ಳಿ ನ್ಯಾಮತಿ, ಬಾರಂದೂರು, ಭದ್ರಾವತಿ, ಸಾಸ್ವೆಹಳ್ಳಿ, ಕೆಂಚಿಕೊಪ್ಪ ಸೇರಿದಂತೆ ವಿವಿದೆಡೆಯಿಂದ ವ್ಯಾಪಾರಸ್ಥರು ಇಲ್ಲಿ ಬಂದು ವ್ಯಾಪಾರ ಮಾಡುತ್ತಾರೆ.ನಾವು ಸ್ವತಃ ಕೈಯಿಂದ ಗಣೇಶನನ್ನು ತಯಾರಿಸುತ್ತೇವೆ. ಆದರೆ ಇಲ್ಲಿ ಕೆಲವರು ಕಣ್ಣೂರು, ಗೋಕಾಕ್ ಭಾಗದಿಂದ ತರುತ್ತಾರೆ.  ಅಂಗಡಿ ಹೆಚ್ಚಾಗಿರುವುದರಿಂದ  ಜನರು ಒಂದು ಕಡೆ ವ್ಯಾಪಾರ ಮಾಡುತ್ತಿಲ್ಲ.  ಹಾರನಹಳ್ಳಿ ಸತೀಶ್

 

Leave a Comment