BREAKING NEWS / ಜೋಗದ ಸಮೀಪ ನೀರಿಗಿಳಿದಿದ್ದ ಓರ್ವ ಅಧಿಕಾರಿ ಮತ್ತು ಬ್ಯಾಂಕ್ ಉದ್ಯೋಗಿ ಸಾವು! ಕಾರ್ಗಲ್​ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದ್ದೇನು?

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಜೋಗದ ಬಳಿಯ ವಡನ್​ ಬೈಲ್ ದೇವಿಗುಂಡಿಯ ಬಳಿ ಇಬ್ಬರು  ನೀರು ಪಾಲಾಗಿರುವ ಘಟನೆ  ಸಂಭವಿಸಿದೆ. ಈ ಬಗ್ಗೆ ಇದೀಗ ಮಾಹಿತಿ ಲಭ್ಯವಾಗಿದ್ದು,  ಸಾಗರದ ಕೃಷಿ ಇಲಾಖೆಯ ಅಧಿಕಾರಿ ಕೆ.ಟಿ. ಕೃಷ್ಣಕುಮಾರ್(36) ಮತ್ತು ಎಚ್‌ಡಿಎಫ್‌ಸಿ ಬ್ಯಾಂಕಿನ ಕಲೆಕ್ಟರ್ ಅರುಣ್(28) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. 

ಕುಟುಂಬ ಸಮೇತ ಇಬ್ಬರು ಅಧಿಕಾರಿಗಳು  ಜೋಗ್ ಫಾಲ್ಸ್ ಪ್ರವಾಸಕ್ಕೆ ತೆರಳಿದ್ದರು ಮಧ್ಯಾಹ್ನ ಊಟ ಮಾಡಿದ ನಂತರ, ಇಬ್ಬರು ದೇವಿ ಗುಂಡಿಯಲ್ಲಿ ಈಜಾಡಲು ನೀರಿಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದ್ದು, ಇಬ್ಬರು ನೀರು ಪಾಲಾಗಿದ್ದಾರೆ. 

ಕಾರ್ಗಲ್ ಪೊಲೀಸರು ಸ್ಥಳಕ್ಕೆ ತೆರಳಿ ನೀರುಪಾಲಾದ ಇಬ್ಬರ ಮೃತದೇಹವನ್ನ ಪತ್ತೆ ಮಾಡಿದ್ದಾರೆ. ಸದ್ಯ ಮೃತದೇಹವನ್ನು ಸಾಗರ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.  

ಇನ್ನಷ್ಟು ಸುದ್ದಿಗಳು 

 


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor