ಶಿವಮೊಗ್ಗಕ್ಕೆ ಹೊಸ ರೈಲು ಮಾರ್ಗ, ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರನ್ನು ಬೇಟಿಯಾದ ಸಂಸದ ಬಿವೈ ರಾಘವೇಂದ್ರ

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗಕ್ಕೆ ಹೊಸ ರೈಲು ಮಾರ್ಗ, ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರನ್ನು ಬೇಟಿಯಾದ ಸಂಸದ ಬಿವೈ ರಾಘವೇಂದ್ರ

ಶಿವಮೊಗ್ಗ, ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆಯಿಂದ ಮಂಗಳೂರು ಮತ್ತು ಹುಬ್ಬಳ್ಳಿಗೆ ನೇರ ರೈಲು ಸಂಪರ್ಕ ಕಲ್ಪಿಸುವ ಹೊಸ ರೈಲು ಮಾರ್ಗಗಳ ಸಮೀಕ್ಷೆ ನಡೆಸುವಂತೆ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸೋಮವಾರ ಗದಗ ರಸ್ತೆಯಲ್ಲಿರುವ ರೈಲ್ವೆ ಸೌಧದಲ್ಲಿ ಪ್ರಧಾನ ವ್ಯವಸ್ಥಾಪಕರನ್ನು ಭೇಟಿಯಾದ ಸಂಸದರು, ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ವಿವಿಧ ರೈಲ್ವೆ ಯೋಜನೆಗಳ ಕುರಿತು ಚರ್ಚಿಸಿದರು. ಇದೇ ವೇಳೆ, ಶಿವಮೊಗ್ಗ, ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲೆಗಳನ್ನು ಸಂಪರ್ಕಿಸುವ ಹೊಸ ಮಾರ್ಗಗಳ ನಿರ್ಮಾಣ ಮತ್ತು ಹೊಸ ರೈಲುಗಳ ಸಂಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರಸ್ತಾಪಗಳನ್ನು ಸಲ್ಲಿಸಿದರು.

ಪ್ರಮುಖ ಮನವಿಗಳು:

ಶಿವಮೊಗ್ಗದಿಂದ ಶೃಂಗೇರಿ ಮಾರ್ಗವಾಗಿ ಮಂಗಳೂರಿಗೆ ಹೊಸ ರೈಲು ಮಾರ್ಗ ನಿರ್ಮಿಸುವುದು.

ತಾಳಗುಪ್ಪ-ಸಿದ್ದಾಪುರ-ಶಿರಸಿ ಮಾರ್ಗವಾಗಿ ಹುಬ್ಬಳ್ಳಿಗೆ ಹೊಸ ರೈಲು ಮಾರ್ಗ ನಿರ್ಮಿಸುವುದು.

ಭದ್ರಾವತಿಯಿಂದ ಚಿಕ್ಕಜಾಜೂರಿಗೆ ಹೊಸ ರೈಲು ಮಾರ್ಗ ನಿರ್ಮಿಸುವುದು.

ಈ ಮೂರು ಹೊಸ ಮಾರ್ಗಗಳ ಸಮೀಕ್ಷಾ ಕಾರ್ಯವನ್ನು ಕೂಡಲೇ ಆರಂಭಿಸಬೇಕು ಎಂದು ಸಂಸದರು ಒತ್ತಾಯಿಸಿದರು. ಅಲ್ಲದೆ, ಮಧ್ಯ ಕರ್ನಾಟಕದಿಂದ ಕರಾವಳಿ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ತಾಳಗುಪ್ಪದಿಂದ ಹೊನ್ನಾವರಕ್ಕೆ ಹಳೆಯ ಮಾರ್ಗದ ಸಮೀಕ್ಷೆ ನಡೆದಿರುವುದರಿಂದ, ಅದನ್ನು ಕೊಂಕಣ ರೈಲ್ವೆಗೆ ಸಂಪರ್ಕಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಕೋರಿದರು.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor