ಶಂಕರಘಟ್ಟ: ಕುವೆಂಪು ವಿ.ವಿ. ಎದುರಿನ ಬೇಕರಿಯಲ್ಲಿ ಅಗ್ನಿ ಅವಘಡ, ಲಕ್ಷಾಂತರ ರೂ. ನಷ್ಟ

prathapa thirthahalli
Prathapa thirthahalli - content producer

Bakery Fire Accident : ಶಂಕರಘಟ್ಟ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಮುಂಭಾಗದ ಮುಖ್ಯ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ರಾತ್ರಿ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಬೇಕರಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.

ಶಂಕರಘಟ್ಟ ಮುಖ್ಯ ರಸ್ತೆಯಲ್ಲಿರುವ ಕೇಕ್‌ ಮನೆ ಬೇಕರಿಯಲ್ಲಿ ತಡರಾತ್ರಿ ಸುಮಾರು 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಮತ್ತು ಸ್ಥಳೀಯರು ಕೂಡಲೇ ನೀರು ಹಾಕಿ ನಂದಿಸಲು ಪ್ರಯತ್ನಿಸಿದ್ದಾರೆ.

- Advertisement -

ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಿಸಿದ್ದಾರೆ. ಆದರೆ, ಅಷ್ಟರಾಗಲೇ ಬೇಕರಿ ಒಳಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಶಾರ್ಟ್‌ ಸರ್ಕಿಟ್‌ನಿಂದಾಗಿ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Bakery Fire Accident

Bakery Fire Accident

Share This Article