SHIVAMOGGA | Dec 11, 2023 ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಲ್ಲಿ ನಡೆಯುತ್ತಿದೆ ಎನ್ನಲಾದ ಇಸ್ಪೀಟು, ಕ್ರಿಕೆಟ್ ಬೆಟ್ಟಿಂಗ್, ಓಸಿ , ಮಟ್ಕಾ ದಂಧೆ ಬಗ್ಗೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ವಿಚಾರದಲ್ಲಿ ಯಾವುದೇ ಮುಲಾಜು ನೋಡುವುದಿಲ್ಲ. ಜಿರೋ ಟಾಲರೆನ್ಸ್ನಲ್ಲಿ ಇಂತಹ ಸಂಘಟಿತ ಅಪರಾಧಗಳನ್ನು ಭೇದಿಸಲಾಗುವುದು ಎಂದಿದ್ದಾರೆ. ಅಲ್ಲದೆ ಈ ಬಗ್ಗೆ ಮಾಹಿತಿ ಇದ್ದರೇ ಪೊಲಿಸ್ ಇಲಾಖೆಗೆ ನೀಡಿ ಎಂದಿದ್ದಾರೆ.
ಶಿವಮೊಗ್ಗದಲ್ಲಿ ಈ ಸಂಬಂಧ ಮಾತನಾಡಿದ ಅವರು, ಭದ್ರಾವತಿಯಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ. ಬಿಜೆಪಿ ಕಾರ್ಯಕರ್ತನ ಕಾರು ಒಡೆದ ಪ್ರಕರಣದಲ್ಲಿ ಮೂವರನ್ನ ಅರೆಸ್ಟ್ ಮಾಡಲಾಗಿದೆ ಎಂದಿದ್ದಾರೆ. ಈ ಘಟನೆ ಏತಕ್ಕಾಗಿ ನಡೆದಿದೆ ಎಂಬುದು ವಿಚಾರಣಾ ಹಂತದಲ್ಲಿದೆ ಎಂದ ಅವರು ತನಿಖೆ ಬಳಿಕ ಮಾಹಿತಿ ನೀಡಲಾಗುವುದು ಎಂದಿದ್ದಾರೆ
READ : ಗ್ರಾಮಸ್ಥರು ಹಿಡಿದ ಆರೋಪಿಗಳನ್ನ ಬಿಟ್ಟು ಕಳಿಸಿದಕ್ಕೆ ಆಕ್ರೋಶ! ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ
ಇನ್ನೂ ನಿನ್ನೆ ನಡೆದ ಹಲ್ಲೆ ಘಟನೆ ಸಂಬಂಧ ಪ್ರತಿಕ್ರಿಯಿಸಿದ ಎಸ್ಪಿ ಮಿಥುನ್ ಕುಮಾರ್, ಗೋಕುಲ್ ಕೃಷ್ಣ ನೀಡಿದ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದ್ದು, ಈ ಸಂಬಂಧ ತನಿಖೆ ನಡೆಸಲಾಗುತ್ತದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಈ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಾಗುವುದು ಎಂದಿದ್ದಾರೆ.
