ಭಾರತ್ ಜೋಡೋ ನ್ಯಾಯ ಯಾತ್ರೆ ವಿಚಾರದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ಜೋರು ಪ್ರತಿಭಟನೆ!

ಹಂಚಿಕೊಳ್ಳಿ
WhatsApp Facebook X Telegram
ಭಾರತ್ ಜೋಡೋ ನ್ಯಾಯ ಯಾತ್ರೆ ವಿಚಾರದಲ್ಲಿ  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ಜೋರು ಪ್ರತಿಭಟನೆ!

SHIVAMOGGA  |  Jan 23, 2024  |  ರಾಷ್ಟ್ರೀಯ ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೊ ನ್ಯಾಯ ಯಾತ್ರೆಗೆ ತಡೆಯೊಡ್ಡಿದ ಅಸ್ಸಾಂ ಸರಕಾರದ ಕ್ರಮ ಖಂಡಿಸಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಹತ್ತು ದಿನಗಳಿಂದ ನಡೆಯುತ್ತಿರುವ ಯಾತ್ರೆ ಅಸ್ಸಾಂ ರಾಜ್ಯ ಪ್ರವೇಶ ಮಾಡಿದೆ. ರಾಹುಲ್ ಗಾಂಧಿಯವರ ಬಸ್ ತಡೆದು ಕಲ್ಲುತೂರಾಟ ಮಾಡಲಾಗಿದೆ. 

ಈ ಘಟನೆಗೆ ಅಸಾಂನ ಸಿಎಂ ಹಿಮಂತ್ ಬಿಸ್ವಾಸ್ ನೇರ ಕಾರಣರಾಗಿದ್ದಾರೆ ಎಂದು ಆರೋಪಿಸಿರುವ ಪ್ರತಿಭಟನಾ ಕಾರರು ಪ್ರತಿಕೃತಿ ದಹನ ಮಾಡಿ ಆಸ್ಲಾಂ ಸರಕಾರದ ವಿರುದ್ಧ ಘೋಷಣೆ ಕೂಗಿದರು. 

ಇನ್ನೂ ಮಹಾವೀರ ಸರ್ಕಲ್‌ನಲ್ಲಿ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಜಿಲ್ಲಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿದರು. ರಾಹುಲ್ ಗಾಂಧಿಯವರ ಯಾತ್ರೆಗೆ ಸಿಗುತ್ತಿರುವ ಪ್ರತಿಕ್ರಿಯೆ ನೋಡಿ ಭಯ ಬಿದ್ದಿರುವ ಬಿಜೆಪಿಯವರು ಈ ರೀತಿಯ ಕೃತ್ಯ ಎಸಗುತ್ತಿದ್ದಾರೆ ಎಂದು ಅವರು ಆರೋಪಿಸಿದರು.


ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor