ನವೆಂಬರ್ 15, 2025 : ಮಲೆನಾಡು ಟುಡೆ : ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಬೆಜ್ಜವಳ್ಳಿ ಸಮೀಪ ನಡೆದ ಘಟನೆಯೊಂದು ಆತಂಕಕ್ಕೆ ಕಾರಣವಾಗಿದೆ. ಇಲ್ಲಿನ ನಿವಾಸಿ, ಬಿಬಿಎ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ನಿಖರ ಕಾರಣ ತಿಳಿದಿಲ್ಲ: ದಬ್ಬಣಗದ್ದೆ ಸಮೀಪದ ಬಚ್ಚನಕೋಡಿಗೆಯಲ್ಲಿ ದುರಂತ ನಡೆದಿದ್ದು, ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಮುದ್ರದ ಅಲೆಯಲ್ಲಿ ಕೊಚ್ಚಿಹೋದ ಶಿವಮೊಗ್ಗದ ನಿವಾಸಿ! ನಡೆದಿದ್ದೇನು?

ದಬ್ಬಣಗದ್ದೆ ಸಮೀಪದ ಬಚ್ಚನಕೋಡಿಗೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಸಮೀಪದ ದಬ್ಬಣಗದ್ದೆ ಸಮೀಪದ ಬಚ್ಚನಕೋಡಿಗೆ ನಿವಾಸಿಯಾದ ಪ್ರಾಪ್ತಿ (21) ಸಾವನ್ನಪ್ಪಿರುವ ವಿದ್ಯಾರ್ಥಿನಿ. ಈಕೆ ತಮ್ಮ ಮನೆಯ ಬಳಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಮೂಲಗಳು ಹೇಳಿವೆ. ಆದಾಗ್ಯು ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಸ್ಪಷ್ಟ ಕಾರಣ ಕಂಡುಕೊಂಡಿಲ್ಲ. ವಿಚಾರಣೆ ನಂತರ, ಇನ್ನಷ್ಟು ವಿಚಾರಗಳು ಗೊತ್ತಾಗಬೇಕಿದೆ. ಈಕೆ ತೃತೀಯ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು, ನಿನ್ನೆ ಬೆಳಗಿನ ಪ್ರಾಪ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. , ಮಾಳೂರು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪಂಚನಾಮೆ ಮುಗಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ.

ಫೋಟೋ ಹಿಡ್ಕಾ..! ಸಕ್ರೆಬೈಲ್ ಉಬ್ಬು ಹತ್ರ ಕಾಡಾನೆ ಕಾಣ್ತು! ತೀರ್ಥಹಳ್ಳಿ ರೋಡಲ್ಲಿ ಜಾಗ್ರತೆ
Thirthahalli BBA Student Prapti (21) Dies by Suicide: Malur Police Launch Investigation
Thirthahalli Malur Police Station, Bachanakodige Suicide Case, Ramesh Achar Daughter News, Malenadu Today Thirthahalli, BBA student suicide Thirthahalli, Prapti death reason, Shivamogga student suicide case, Malur Police investigation student death, Educational pressure suicide Karnataka, ತೀರ್ಥಹಳ್ಳಿ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರಾಪ್ತಿ ಸಾವು, ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ, ಮಾಳೂರು ಪೊಲೀಸ್ ತನಿಖೆ, ಶಿವಮೊಗ್ಗ ವಿದ್ಯಾರ್ಥಿ ಆತ್ಮಹತ್ಯೆ, ಶೈಕ್ಷಣಿಕ ಒತ್ತಡ, ದಬ್ಬಣಗದ್ದೆ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
