MALENADUTODAY.COM | SHIVAMOGGA | #KANNADANEWSWEB
ಶಿವಮೊಗ್ಗ ಪೊಲೀಸರು ರೌಡಿಗಳ ಪರೇಡ್ ಮುಂದುವರಿಸಿದ್ದಾರೆ. ಕೋಟೆ ಪೊಲೀಸ್ ಸ್ಟೇಷನ್ನ ಪೊಲೀಸರ ಬಳಿಕ ಇದೀಗ ತುಂಗಾನಗರ ಪೊಲೀಸ್ ಠಾಣೆ ಪೊಲೀಸ್ರು ರೌಡಿಗಳ ಪರೇಡ್ ನಡೆಸಿ ಎಚ್ಚರಿಕೆ ನೀಡಿದ್ಧಾರೆ. ದಿನಾಂಕ 23-02-2023 ರಂದು ತುಂಗಾನಗರ ಪೊಲೀಸ್ ಠಾಣೆ ಪಿಎಸ್ಐ ರಾಜುರೆಡ್ಡಿ ನೇತೃತ್ವದಲ್ಲಿ, ಠಾಣಾ ವ್ಯಾಪ್ತಿಯ ರೌಡಿ ಆಸಾಮಿಗಳನ್ನು ಪೊಲೀಸ್ ಠಾಣೆಗೆ ಕರೆಸಿ ರೌಡಿ ಪರೇಡ್ ಕೈಗೊಳ್ಳಲಾಗಿದೆ.
ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದೆ ಇರುವಂತೆ ಎಚ್ಚರಿಕೆ ನೀಡಲಾಗಿದ್ದು, ಒಂದು ವೇಳೆ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಗಡಿಪಾರು / ಗೂಂಡಾ ಕಾಯ್ದೆ ರೀತ್ಯಾ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿರುತ್ತಾರೆ.
ಮುಂದುವರಿದ ಲಾಡ್ಜ್ ವಿಸಿಟ್
ಇನ್ನೊಂದೆಡೆ ಪೊಲೀಸರು ಲಾಡ್ಜ್ಗಳ ದಾಖಲಾತಿ ಪರಿಶೀಲನೆಯನ್ನು ಮುಂದುವರಿಸಿದ್ದಾರೆ. ನಿನ್ನೆ ದಿನಾಂಕಃ- 23-02-2023 ರಂದು ಶಿಕಾರಿಪುರ ಟೌನ್ ಪೊಲೀಸ್ ಠಾಣೆ ಪಿಎಸ್ ಮಂಜುನಾಥ ಎಸ್ ಕೊಪ್ಪಲೂರು, ತಮ್ಮ ಠಾಣಾ ವ್ಯಾಪ್ತಿಯ ಲಾಡ್ಜ್ / ರೆಸಾರ್ಟ್ ಗಳಿಗೆ ಭೇಟಿ ನೀಡಿ, ಲಾಡ್ಜ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡುವ ಗ್ರಾಹಕರ ವಿವರವನ್ನು ರಿಜಿಸ್ಟರ್ ನಲ್ಲಿ ನಮೂದಿಸಿರುವ ಬಗ್ಗೆ ಹಾಗೂ ಲಾಡ್ಜ್ ಗಳಲ್ಲಿ ಅಳವಡಿಸಲಾದ ಸಿಸಿ ಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆಯ ಬಗ್ಗೆ ಪರಿಶೀಲಿಸಿದ್ದಾರೆ.