KARNATAKA NEWS/ ONLINE / Malenadu today/ May 19, 2023 SHIVAMOGGA NEWS
ಸಾಗರ/ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಪಾದಚಾರಿಯೊಬ್ಬರಿಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಇಲ್ಲಿನ ಯೆಡೆಹಳ್ಳಿಯ ಪೆಟ್ರೋಲ್ ಬಂಕ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು , ಅಲ್ಲಿಂದ ಎಸ್ಕೇಪ್ ಆಗಿದೆ.
ನಿನ್ನೆ ರಾತ್ರಿ ನಡೆದ ಘಟನೆ ಯಲ್ಲಿ 56 ವರ್ಷದ ಶಿವಕುಮಾರ್ ಎಂಬವರು, ಗಂಭೀರವಾಗಿ ಗಾಯಗೊಂಡಿದ್ದರು.ತಕ್ಷಣವೇ ಅವರನ್ನ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಸ್ಟೇಷನ್ನಲ್ಲಿ ಕೇಸ್ ದಾಖಲಾಗಿದೆ.
