KARNATAKA NEWS/ ONLINE / Malenadu today/ Jun 3, 2023 SHIVAMOGGA NEWS
ಶಿವಮೊಗ್ಗ: ಕಾಂಗ್ರೆಸ್ ಜನರಿಗೆ ನೀಡಿರುವ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಆದೇಶ ಹೊರಡಿಸಿದ್ದಕ್ಕೆ ಜಿಲ್ಲಾ ಎನ್ ಎಸ್ಯುಐ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಅಶೋಕ ವೃತ್ತ ದಲ್ಲಿ ಶುಕ್ರವಾರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ಪಟಾಕಿ ಸಿಡಿಸಿ ಕಾಂಗ್ರೆಸ್ ಸಂಭ್ರಮಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಕಾಂಗ್ರೆಸ್ ನುಡಿದಂತೆ ನಡೆ ಯುವ ಸರ್ಕಾರ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದರು. ಮಾಜಿ ಎಂಎಲ್ಸಿ ಆರ್.ಪ್ರಸನ್ನ ಕುಮಾರ್, ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ, ಪ್ರಮುಖರಾದ ಎಸ್.ಪಿ. ದಿನೇಶ್, ಕಲೀಮ್ ಪಾಶಾ ಇತರರಿದ್ದರು.