BREAKING NEWS / ಅರಶಿನ ಗುಂಡಿ ಘಟನೆ ಮಾಸುವ ಮುನ್ನವೆ ಮತ್ತೊಬ್ಬ ಯುವಕ ನೀರಿನಲ್ಲಿ ನಾಪತ್ತೆ! ಶಿವಮೊಗ್ಗದ ತುಂಗಾ ಡ್ಯಾಂ ಬಳಿ ಹುಡುಕಾಟ

Malenadu Today

KARNATAKA NEWS/ ONLINE / Malenadu today/ Aug 12, 2023 SHIVAMOGGA NEWS 

ಕೊಲ್ಲೂರು ಅರಶಿನ ಗುಂಡಿ ಫಾಲ್ಸ್​ನ ಘಟನೆ ಕಣ್ಮುಂದೆ ಇರುವಾಗಲೇ ಶಿವಮೊಗ್ಗ ಇನ್ನೊಬ್ಬ ಯುವಕ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ತುಂಗಾ ಡ್ಯಾಂನ ಎದುರು , ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ತಡವಾಗಿ ವರದಿಯಾಗಿದ್ದು, ನಿನ್ನೆಯಿಡಿ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇವತ್ತು ಕೂಡ ಹುಡುಕಾಟ ಮುಂದುವರಿಸುವ ಸಾಧ್ಯತೆ ಇದೆ. 

ಅಗ್ನಿಶಾಮಕ ದಳದ ಅಧಿಕಾರಿ ವಸಂತ್ ಕುಮಾರ್ ಸೇರಿದಂತೆ ಒಟ್ಟು ಆರು ಜನ ಅಗ್ನಿಶಾಮಕ ಸಿಬ್ಬಂದಿಯ ತಂಡ ನಿನ್ನೆಯಿಡಿ, ಯಾಂತ್ರಿಕ ಬೋಟ್​ನಲ್ಲಿ ನಾಪತ್ತೆಯಾದ ಯುವಕನಿಗಾಗಿ ಹುಡುಕಾಟ ನಡೆಸಿದೆ. ಸ್ಥಳೀಯ ಮೀನುಗಾರರು ಮತ್ತು ಈಜುಗಾರರು ಕೂಡ ಸ್ಥಳದಲ್ಲಿ ಕಾರ್ಯಾಚರಣೆಗೆ ಸಾಥ್ ನೀಡಿದ್ದರು. ಇನ್ನೂ ಸಂಜೆಯಾದ್ದರಿಂದ ಹುಡುಕಾಟವನ್ನು ಸ್ಥಗಿತಗೊಳಿಸಲಾಗಿದೆ. ಇವತ್ತು ಕಾರ್ಯಾಚರಣೆ ಮುಂದುವರಿಸುವ ಸಾಧ್ಯತೆ ಇದೆ. 

ಗಾಜನೂರು ಜಲಾಶಯದ ಮೇಲೆ ಹೋಗಲು ಅವಕಾಶ ನೀಡಲಾಗಿಲ್ಲ. ಆದರೆ ಚಾನಲ್​ ಪಕ್ಕದಲ್ಲಿ ಹೋದರೇ ಡ್ಯಾಂನ್ನ ಹತ್ತಿರದಿಂದ ಕಣ್ತುಂಬಿಕೊಳ್ಳಬಹುದು ಅಲ್ಲದೆ, ಅಲ್ಲಿರುವ ಕಾಮಗಾರಿ ಸೇತುವೆಯ ಮೇಲೆ ಪ್ರವಾಸಿಗರು ಓಡಾಡುವುದು ಸಾಮಾನ್ಯ ಸಂಗತಿಯಾಗಿದೆ. ಅಲ್ಲಿಯೇ ಈ ದುರ್ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳುತ್ತಿದ್ಧಾರೆ. 

ನಾಪತ್ತೆಯಾಗಿರುವ ಯುವಕನ್ನು ಮಿಳಘಟ್ಟ ಮೂಲದವನು ಎನ್ನಲಾಗಿದ್ದು ಹರೀಶ್ ಎಂದು ತಿಳಿದುಬಂದಿದೆ. ಈತನಿಗಾಗಿ ಗಾಜನೂರು ಡ್ಯಾಂ ಗೇಟ್​ನಿಂದ ಮುಂಭಾಗದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ತುಂಗಾನಗರ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ಇವತ್ತು ಕೂಡ ಸರ್ಚ್ ಆಪರೇಷನ್​ ನಡೆಸುವ ಸಾಧ್ಯತೆ ಇದೆ. 

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು

 

Share This Article