13 ಸರ್ಕಲ್​ 13 ರಸ್ತೆ ! ಗೊತ್ತಾಗಲ್ಲ ಅನ್ನುವಂತಿಲ್ಲ! ಆಗಸ್ಟ್​ 28 ರ ನಂತರ ಪ್ರತಿಯೊಂದಕ್ಕೂ ಬರುತ್ತೆ ಸ್ಮಾರ್ಟ್ ಫೈನ್​! ಹೇಗೆ ಗೊತ್ತಾ?

This Article Written by / Malenadu Today / ಆಗಷ್ಟ್ 22, 2023

KARNATAKA NEWS/ ONLINE / Malenadu today/ Aug 22, 2023 SHIVAMOGGA NEWS

ಸ್ಮಾರ್ಟ್ ಸಿಟಿ ಯೋಜನೆಯ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್’ಮೆಂಟ್ ಸಿಸ್ಟಮ್ (ಐಟಿಎಂಎಸ್) ವ್ಯವಸ್ಥೆಯನ್ನು ಶಿವಮೊಗ್ಗದಲ್ಲಿ ಜಾರಿಗೆ ತರಲಾಗಿದೆ. ಈ ವ್ಯವಸ್ಥೆಯಲ್ಲಿ ಏನೇನೆಲ್ಲಾ ಮಾಡಲಾಗಿದೆ ಎಂಬುದನ್ನ ನೋಡುವುದಾದರೆ,  ಶಿವಮೊಗ್ಗದ ತಲಾ 13 ವೃತ್ತ ಹಾಗೂ ನಗರ ಪ್ರವೇಶದ ಪ್ರಮುಖ 13 ರಸ್ತೆಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮರಾಗಳ ಅಳವಡಿಸಲಾಗಿದೆ. 

ಇದರಲ್ಲಿ ಆರ್.ಎಲ್.ವಿ.ಡಿ ಕ್ಯಾಮರಾಗಳು, ಸಿಗ್ನಲ್ ಜಂಪ್ ಮಾಡಿದ ವಾಹನಗಳ ಫೋಟೋ-ವೀಡಿಯೋ ಸಂಗ್ರಹಿಸುತ್ತವೆ. ಹಾಗೆಯೇ ಎಸ್.ವಿ.ಡಿ ಕ್ಯಾಮರಾಗಳು ಮಿತಿಮೀರಿದ ವೇಗದಲ್ಲಿ ಸಂಚರಿಸುವ ವಾಹನಗಳನ್ನ ಪತ್ತೆ ಮಾಡುತ್ತವೆ.  ಪಿಟಿಝಡ್ – ಎ.ಎನ್.ಪಿ.ಆರ್, ಎ.ಎಸ್.ವಿ.ಡಿ ಕ್ಯಾಮರಾಗಳು ಹೆಲ್ಮೆಟ್ ರಹಿತ, ತ್ರಿಬಲ್ ರೈಡಿಂಗ್, ಮೊಬೈಲ್ ರೈಡಿಂಗ್, ಒನ್ ವೇ, ಪ್ರವೇಶ ನಿಷಿದ್ಧ, ನೋ ಪಾರ್ಕಿಂಗ್ ಉಲ್ಲಂಘನೆ ಮಾಡುವ ವಾಹನಗಳ ಫೋಟೋ – ವೀಡಿಯೋ ಸೆರೆ ಹಿಡಿಯುತ್ತವೆ.

ಸಿಸ್ಟಮ್​ ಹೇಗೆ ಕೆಲಸ ಮಾಡುತ್ತದೆ?

ಕ್ಯಾಮರಾಗಳಲ್ಲಿ ಸೆರೆಯಾದ ಫೋಟೋ – ವೀಡಿಯೋಗಳು ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಗೆ ರವಾನೆಯಾಗುತ್ತವೆ. ಕಮಾಂಡ್ ಸೆಂಟರ್ ನಲ್ಲಿ ಐಟಿಎಂಸ್ ತಂತ್ರಾಶದ ಸಹಾಯದಿಂದ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳ ಮಾಹಿತಿ ಪರಿಶೀಲಿಸಲಾಗುತ್ತದೆ. ಸಂಚಾರ ನಿಯಮ ಉಲ್ಲಂಘನೆ ನೋಟೀಸ್ ಸಿದ್ದಪಡಿಸಿ ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಅಥವಾ ವಾಹನ ಮಾಲೀಕರ ವಿಳಾಸಕ್ಕೆ ಅಂಚೆ ಮೂಲಕ ನೋಟೀಸ್ ನೀಡಲಾಗುತ್ತದೆ. 

ಮೊಬೈಲ್ ಅಥವಾ ಅಂಚೆ ಮೂಲಕ ಟ್ರಾಫಿಕ್ ನಿಯಮ ಉಲ್ಲಂಘನೆಯ ನೋಟೀಸ್ ಬಂದ ವಾಹನ ಚಾಲಕರು, ನಮೂದಿತ ದಂಡದ ಮೊತ್ತವನ್ನು ಸಮೀಪದ ಸಂಚಾರಿ ಪೊಲೀಸ್ ಠಾಣೆ ಅಥವಾ ಕರ್ತವ್ಯನಿರತ ಸಂಚಾರಿ ಪೊಲೀಸ್ ಅಧಿಕಾರಿಗಳ ಬಳಿ ಸ್ಪಾಟ್  ಫೈನ್ ಡಿವೈಎಸ್ ನಲ್ಲಿ ಪರಿಶೀಲಿಸಿ ದಂಡ ಪಾವತಿಸಬೇಕಾಗುತ್ತದೆ. 

ಆ. 28 ರ ನಂತರ ಸ್ಮಾರ್ಟ್ ಸಿಟಿ ಐಟಿಎಂಎಸ್ ತಂತ್ರಾಂಶದ ಸಹಾಯದಿಂದ ನೋಟೀಸ್ ಗಳು ರವಾನೆಯಾಗಲಿದೆ. ವಾಹನ ಸವಾರರ ಸಂಚಾರಿ ನಿಯಮಗಳ ಕಡ್ಡಾಯ ಪಾಲನೆ ಮಾಡಬೇಕು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಯಾವ್ಯಾವ ವೃತ್ತಗಳಲ್ಲಿ ಕ್ಯಾಮರಾ?

ಮಹಾವೀರ ಸರ್ಕಲ್, ಶಿವಮೂರ್ತಿ ಸರ್ಕಲ್, ಕೆಇಬಿ ಸರ್ಕಲ್, ಸಂದೇಶ್ ಮೋಟಾರ್ ಸರ್ಕಲ್, ಶಂಕರಮಠ ಸರ್ಕಲ್, ಕರ್ನಾಟಕ ಸಂಘ ಸರ್ಕಲ್, ಐಬಿ ಸರ್ಕಲ್, ಆಯನೂರು ಗೇಟ್, ಜೈಲ್ ಸರ್ಕಲ್, ಲಕ್ಷ್ಮೀ ಟಾಕೀಸ್ ಸರ್ಕಲ್, ಪೊಲೀಸ್ ಚೌಕಿ, ಆಲ್ಕೋಳ ಸರ್ಕಲ್, ಗೋಪಿ ಸರ್ಕಲ್ನಗರ ಪ್ರವೇಶ – ನಿರ್ಗಮನ ರಸ್ತೆಗಳ ವಿವರ : ಮಲವಗೊಪ್ಪ ಬಿ.ಹೆಚ್.ರಸ್ತೆ, ಕೆವಿಎಸ್ ಸಮೀಪ ಎನ್.ಆರ್.ಪುರ ರಸ್ತೆ, ಊರುಗಡೂರು ಜಂಕ್ಷನ್ – 1, ಊರೂಗಡೂರು ಜಂಕ್ಷನ್ – 2, ಹೊಂಡಾ ಶೋ ರೂಂ ಸಮೀಪದ ಬೈಪಾಸ್ ರಸ್ತೆ, ಎನ್.ಟಿ.ರಸ್ತೆ, ಶರವಾತಿ ಡೆಂಟಲ್ ಕಾಲೇಜು ಸಮೀಪದ ರಸ್ತೆ, ಬುದ್ದನಗರ ಕ್ರಾಸ್, ತುಂಗಾನಗರ ಪೊಲೀಸ್ ಸ್ಟೇಷನ್, ಸೋಮಿನಕೊಪ್ಪ, ಕೃಷಿ ಕಾಲೇಜು ಸಮೀಪದ ಸವಳಂಗ ರಸ್ತೆ, ತ್ಯಾವರೆಚಟ್ನಳ್ಳಿ ರಸ್ತೆ, ಗುರುಪುರ ರಸ್ತೆ,.

ಇನ್ನೂ ಈ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಹೇಳಿದ್ಧೇನು ಎಂಬುದರ ವಿವರ ಇಲ್ಲಿದೆ ಕ್ಲಿಕ್ ಮಾಡಿ ಓದಿ : ಇನ್ಮೇಲೆ ಹುಷಾರ್! ಆಕ್ಟ್ರೀವ್ ಆಗಿದೆ ಕ್ಯಾಮರಾ ಕಣ್ಣು! ಮೊಬೈಲ್​ಗೆ ಕಳಿಸ್ತಾರೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ?

ಹಾಗೂ ಸ್ಮಾರ್ಟ್​ ಸಿಟಿಯ ಈ ತಂತ್ರಾಂಶದ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಪಿಡಿಎಫ್​ ಫೈಲ್​ನ ಲಿಂಕ್​ ಇಲ್ಲಿದೆ ಕ್ಲಿಕ್ ಮಾಡಿ ಓದಿ :
Provided by

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು

 

ಮುಂದಿನ ಸುದ್ದಿ ಒದಿ

Leave a Comment