KARNATAKA NEWS/ ONLINE / Malenadu today/ Sep 3, 2023 SHIVAMOGGA NEWS
ಶಿವಮೊಗ್ಗದ ಸೋಗಾನೆಯಲ್ಲಿರುವ ಕುವೆಂಪು ವಿಮಾನ ನಿಲ್ದಾಣ (Kuvempu Airport) ದಲ್ಲಿ ವಾಣಿಜ್ಯವಿಮಾನಯಾನ ಆರಂಭವಾದ ದಿನ ಅಲ್ಲಿಯ ಸೈನ್ ಬೋರ್ಡ್ಗಳ ಬಗ್ಗೆ ಆಕ್ಷೇಪಣೆ ಕೇಳಿಬಂದಿತ್ತು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡ ಭಾಷೆಯನ್ನು ಕಡೆಗಣನೆ ಮಾಡಲಾಗಿದೆ ಹಿಂದಿ ಭಾಷೆಗೆ ಒತ್ತುಕೊಡಲಾಗಿದೆ. ರಾಜ್ಯಸರ್ಕಾರ ನಿರ್ವಹಿಸುವ ಏರ್ಪೋರ್ಟ್ನಲ್ಲಿ ಕನ್ನಡಕ್ಕೆ ಆದ್ಯತೆ ಕೊಡದಿದ್ದರೇ ಹೇಗೆ ಎಂಬ ಪ್ರಶ್ನೆ ಕೇಳಿಬಂದಿತ್ತು.
ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಆರಂಭವಾಗಿತ್ತಲ್ಲದೇ ಸಚಿವ ಎಂಬಿ ಪಾಟೀಲ್ (MB Patil) ರನ್ನ ಟ್ಯಾಗ್ ಮಾಡಿ ವಿಚಾರದ ಗಮನ ಸೆಳೆದಿದ್ದರು. ಅಲ್ಲದೆ ಇದೇ ವಿಚಾರವಾಗಿ ಏರ್ಪೋರ್ಟ್ ಟರ್ಮಿನಲ್ ಎದುರು ಪ್ರತಿಭಟನೆ ಕೂಡ ನಡೆದಿತ್ತು. ಇನ್ನೂ ಸೋಶಿಯಲ್ ಮೀಡಿಯಾದ ಅಭಿಯಾನದಲ್ಲಿ ಪ್ರಕಟವಾಗಿದ್ದ ಪೋಸ್ಟ್ವೊಂದಕ್ಕೆ ಉತ್ತರಿಸಿದ್ದ ಸಚಿವರು, ಇದು ನನ್ನ ಗಮನಕ್ಕೆ ಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಮಾತನಾಡುವೆ ಎಂದಿದ್ದರು
ಸಚಿವರ ಪ್ರತಿಕ್ರಿಯೆ ಬೆನ್ನಲ್ಲೆ ಇದೀಗ ಏರ್ಪೋರ್ಟ್ ಸೈನ್ ಬೋರ್ಡ್ನಲ್ಲಿ ಕನ್ನಡ ಕಾಣಿಸಿಕೊಂಡಿದೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆ @MBPatil ನಲ್ಲಿ ಪೋಸ್ಟ್ ಹಾಕಿರುವ ಸಚಿವ ಎಂ.ಬಿ.ಪಾಟೀಲ್ ರವರು, ಕನ್ನಡವೇ ಸತ್ಯ-ಕನ್ನಡವೇ ನಿತ್ಯ! ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿನ ಮಾಹಿತಿ ಫಲಕ. ನೆಲ-ಜಲ-ಭಾಷೆಯ ವಿಷಯದಲ್ಲಿ ನಮ್ಮದು ಒಗ್ಗಟ್ಟಿನ ಧ್ವನಿ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನಷ್ಟು ಸುದ್ದಿಗಳು
SHIVAMOGGA AIRPORT ನಿಂದ ವಿಮಾನಯಾನ! ಪ್ರತಿ ಟಿಕೆಟ್ಗೆ 500 ರೂಪಾಯಿ ಸಬ್ಸಿಡಿ!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೊದಲ ಇಂಡಿಗೋ ಪ್ಲೈಟ್