KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’
ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (Shimoga District Co-Operative Central Bank Ltd.) ಅಧ್ಯಕ್ಷ ಸ್ಥಾನಕ್ಕೆ ಇದೇ ಸೆಪ್ಟೆಂಬರ್ 29 ರಂದು ಚುನಾವಣೆ ನಡೆಯುವುದು ನಿಕ್ಕಿಯಾಗಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ಎಂ.ಬಿ ಚನ್ನವೀರಪ್ಪರವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯಾಗಿತ್ತು. ಹಾಗಾಗಿ ಅವರು ಪದ್ಯುಚ್ಯುತಗೊಂಡು, ಹಂಗಾಮಿ ಅಧ್ಯಕ್ಷರು ಅಧಿಕಾರವಹಿಸಿಕೊಂಡಿದ್ದರು.

ಇದೀಗ ಸೆಪ್ಟೆಂಬರ್ 29 ರಂದು ಚುನಾವಣೆ ನಡೆಯಲಿದ್ದು, ಬಹುತೇಕ ಡಾ.ಆರ್.ಎಂ.ಮಂಜುನಾಥ್ ಗೌಡರು ಡಿಸಿಸಿ ಬ್ಯಾಂಕ್ನ ಅಧ್ಯಕ್ಷಗಿರಿ ವಹಿಸುವ ಸಾಧ್ಯತೆ ಇದೆ.
ಈ ನಡುವೆ ಕಾನೂನು ಪ್ರಕ್ರಿಯೆಯಲ್ಲಿ ಲೋಪದೋಷಗಳು ಆಗದಂತೆ ಕೆಲವೊಂದು ಚಟುವಟಿಕೆಗಳು ಡಿಸಿಸಿ ಬ್ಯಾಂಕ್ನಲ್ಲಿ ನಡೆದಿದ್ದವು. ನಿರ್ದೇಶಕರ ಸ್ಥಾನಕ್ಕೆ ಕೆಪಿ ದುಗ್ಗಪ್ಪಗೌಡರು ರಾಜೀನಾಮೆ ನೀಡಿದ್ದರಿಂದ ಅವರ ಸ್ಥಾನದಲ್ಲಿ ನಿರ್ದೇಶಕರಾಗಿ ಆರ್ ಎಂ ಮಂಜುನಾಥ್ ಗೌಡರನ್ನ ನೇಮಕ ಮಾಡಲಾಗಿತ್ತು. ಇದರಿಂದ ಅಧ್ಯಕ್ಷ ಗಾದಿಗೆ ಏರುವ ಹಾದಿಯು ಆರ್ಎಂಎಂ ಗೆ ಸಲೀಸಾಗಿತ್ತು.

ಡಿಸಿಸಿ ಬ್ಯಾಂಕ್ನ ಹಾಲಿ ಆಡಳಿತ ಮಂಡಳಿಯ ಅವಧಿಯು ಇನ್ನೇನು ಕೆಲವು ತಿಂಗಳಷ್ಟೆ. ಇದರ ನಡುವೆ ಆರ್ ಎಂ ಎಂ ಮಂಜುನಾಥ್ ಗೌಡರು ಅಧ್ಯಕ್ಷರಾಗುವ ನಿಟ್ಟಿನಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.
ಇನ್ನಷ್ಟು ಸುದ್ದಿಗಳು
ಹಬ್ಬದ ದಿನ ತವರು ಮನೆಯಿಂದ ಗಂಡನ ಮನೆಗೆ ಹೋದ ಬೆನ್ನಲ್ಲೆ ಯುವತಿ ಸಾವು! ಮದುವೆಯಾಗಿ ಏಳು ತಿಂಗಳಿನಲ್ಲಿ ನಡೆದಿದ್ದೇನು?
ಚೈತ್ರಾ ಕುಂದಾಪುರ ವಿರುದ್ಧ ಟಿಕೆಟ್ ಡೀಲ್ ಕೇಸ್/ ಶಿವಮೊಗ್ಗ ನಗರದಲ್ಲಿ ಆರೋಪಿ ಮಹಜರ್! ಯಾರೆಲ್ಲಾ ಬಂದಿದ್ರು!?


