KARNATAKA NEWS/ ONLINE / Malenadu today/ Oct 14, 2023 SHIVAMOGGA NEWS
ಇತ್ತೀಚೆಗೆ ಶಿಕಾರಿಪುರ-ಶಿವಮೊಗ್ಗ ರೈಲು ಮಾರ್ಗದ ಅಪ್ಡೇಟ್ ಸಿಕ್ಕಿತ್ತು . ಇದೀಗ ತಾಳಗುಪ್ಪ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣದ ಬಗ್ಗೆ ಅಪ್ಡೇಟ್ ದೊರಕಿದೆ. ತಾಳಗುಪ್ಪ-ಹುಬ್ಬಳ್ಳಿ ರೈಲು ಮಾರ್ಗ ಯೋಜನೆಯ ಸರ್ವೇ ಕಾರ್ಯ ಚುರುಕುಗೊಂಡಿದೆ. ರೈಲು ಮಾರ್ಗದ ಗಡಿ ಗುರುತಿಸಿ ಕಲ್ಲು ನಿಲ್ಲಿಸಲಾಗಿದೆ.
ತಾಳಗುಪ್ಪ-ಸಿದ್ದಾಪುರ-ಶಿರಸಿ-ಮುಂಡಗೋಡ-ತಡಸ ಮಾರ್ಗವಾಗಿ ಹುಬ್ಬಳ್ಳಿಗೆ ಸಂಚರಿಸುವ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಸರ್ವೇ ನಡೆಯುತ್ತಿದೆ.
ಸದ್ಯ ಮುಂಡಗೋಡ ತಾಲೂಕಿನ ಮಳಗಿ ಭಾಗದ ಕ್ಯಾಗದಿಕೊಪ್ಪ, ಕಲ್ಲಹಕ್ಕಲ, ಧರ್ಮಾ ಕಾಲನಿ, ಮಳಲಗಾಂವ, ಗೊಟಗೊಡಿಕೊಪ್ಪ ಮುಂತಾದ ಭಾಗದಲ್ಲಿ ಈಗಾಗಲೇ ರೈಲು ಮಾರ್ಗದ ಗಡಿ ಗುರುತಿಸಿ ಕಲ್ಲು ನಿಲ್ಲಿಸಲಾಗಿದೆ.
ಪಾಳಾ-ಮುಂಡಗೋಡ ಮಾರ್ಗವಾಗಿ ಹುಬ್ಬಳ್ಳಿಗೆ ಹೋಗಲಿರುವ ರೈಲು ಮಾರ್ಗ ಇದಾಗಿದೆ. ಒಟ್ಟು ಮೂರು ಜಿಲ್ಲೆಗಳಲ್ಲಿ ಅಂದರೆ ಉತ್ತರ ಕನ್ನಡ , ಶಿವಮೊಗ್ಗ, ಧಾರವಾಡ ಜಿಲ್ಲೆಗಳಲ್ಲಿ ಈ ರೈಲು ಹಾದುಹೋಗಲಿದೆ.
ಇನ್ನಷ್ಟು ಸುದ್ದಿಗಳು


