KARNATAKA NEWS/ ONLINE / Malenadu today/ Oct 26, 2023 SHIVAMOGGA NEWS
ಅ.27 ರಂದು ವಿದ್ಯುತ್ ವ್ಯತ್ಯಯ | ಶಿವಮೊಗ್ಗ ತಾಲ್ಲೂಕಿನ ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರು, ಎಫ್-4 ಸಂತೇಕಡೂರು ಮಾರ್ಗದಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಅ.27 ರಂದು ಮಧ್ಯಾಹ್ನ 12.30 ರಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಅ.28 ರಂದು ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ
ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.28 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಈಡಿಗರ ಭವನ, ಸುವರ್ಣ ಸಂಸ್ಕೃತಿ ಭವನ, ಅಶೋಕನಗರ, ಎ.ಆರ್.ಬಿ. ಕಾಲೋನಿ, ಜನತಾ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಅ.29 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.29ರ ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ
ಈಡಿಗರ ಭವನ, ಸುವರ್ಣ ಸಂಸ್ಕತಿ ಭವನ, ಅಶೋಕನಗರ, ಎ.ಆರ್.ಬಿ ಕಾಲೋನಿ, ಜನತಾ ಕಾಲೋನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇನ್ನಷ್ಟು ಸುದ್ದಿಗಳು
ಆಸ್ಪತ್ರೆ Appointment ಗಾಗಿ 10 ರೂಪಾಯಿ Pay ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್!
ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್ | ಸಿಕ್ತು ಮಂಗಳೂರು ಸ್ಪೇಷಲ್ 93 ಬೀಡಿ | ಕಾರ್ಬನ್ ಮೊಬೈಲ್!