SHIVAMOGGA NEWS / ONLINE / Malenadu today/ Nov 21, 2023 NEWS KANNADA
Shivamogga| Malnenadutoday.com | ಶಿವಮೊಗ್ಗ ಜಿಲ್ಲೆಯ ಆಡಗೋಡಿ ಗ್ರಾಮದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ .
ಕುಂಸಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲವಾದರೂ ಪ್ರೇಮ ವೈಫಲ್ಯದಿಂದ ಈತ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.
READ : ಮೆಸ್ಕಾಂ ಪ್ರಕಟಣೆ! ಶಿವಮೊಗ್ಗ ನಗರದ 25 ಕ್ಕೂ ಹೆಚ್ಚು ಪ್ರದೇಶದಲ್ಲಿ ನಾಳೆ ವಿದ್ಯುತ್ ವ್ಯತ್ಯಯ!
ನಿನ್ನೆ ಸಂಜೆ ಇಲ್ಲಿನ 21 ವರ್ಷದ ವಿನೋದ್ ಎಂಬಾತ ತನ್ನ ಜಮೀನಿಗೆ ಹೋಗಿ ಮನೆಗೆ ವಾಪಸ್ ಆಗಿದ್ದಾನೆ. ಬಳಿಕ ಮನೆಯಲ್ಲಿಯೇ ವಿಷ ಸೇವಿಸಿದ್ದಾನೆ. ಸದ್ಯ ಘಟನೆ ಸಂಬಂಧ ಕುಂಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.
