SHIVAMOGGA NEWS / ONLINE / Malenadu today/ Nov 23, 2023 NEWS KANNADA
Shivamogga | Malnenadutoday.com | ಭದ್ರಾವತಿ ತಾಲ್ಲೂಕು ಅನ್ವರ್ ಕಾಲೋನಿಯಲ್ಲಿ ಕೇಳಿಬಂದಿದ್ದ ಆರು ಮಂದಿ ನಾಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಅವರ ಕುಟುಂಬಸ್ಥರ ಸುಪರ್ದಿಗೆ ಒಪ್ಪಿಸಿದ್ದಾರೆ.
READ :ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ!
ಮೈಸೂರು ಜಿಲ್ಲೆಯ ಸ್ಥಳವೊಂದರಲ್ಲಿದ್ದ ಐವರನ್ನು ಸಹ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಸಿಬ್ಬಂದಿ ಕರೆತಂದಿದ್ದಾರೆ. ಕಳೆದ ನವೆಂಬರ್ 11 ರಂದು ಒರ್ವ ಮಹಿಳೆ ಹಾಗೂ ಮಕ್ಕಳು ಸೇರಿ ಒಟ್ಟು ಆರು ಮಂದಿ ನಾಪತ್ತೆಯಾಗಿದ್ದರು. ಪ್ರಕರಣ ಸಂಬಂಧ ತಡವಾಗಿ ದೂರು ದಾಖಲಾಗಿತ್ತು.
READ:ದಾದಾಪೀರ್ ರಾಣೆಬೆನ್ನೂರು ನಾಪತ್ತೆ/ ಪುಟ್ಪಾತ್ ಸುಸ್ತಾಗಿ ಬಿದ್ದಿದ್ದ ವ್ಯಕ್ತಿ ಸಾವು!
ಈ ಸಂಬಂಧ ತನಿಖೆ ನಡೆಸಿದ ಪೊಲೀಸರು ಸದ್ಯ ಎಲ್ಲರನ್ನು ಸುರಕ್ಷಿತವಾಗಿ ವಾಪಸ್ ಕರೆತಂದಿದ್ದಾರೆ. ಇನ್ನೂ ಎಲ್ಲರು ಮನೆಬಿಟ್ಟು ಹೋಗಲು ವೈಯಕ್ತಿಕ ಕಾರಣ ಇರಬಹುದು ಎನ್ನಲಾಗುತ್ತಿದೆ. ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ