SHIVAMOGGA NEWS / Malenadu today/ Dec 1, 2023 | MALENADU TODAY | MALNAD NEWS
CHIKKAMAGALURU | ಚಿಕ್ಕಮಗಳೂರು ಜಿಲ್ಲೆಯಲ್ಲಿ ಬ್ಯಾಂಕಿನ ಸಿಬ್ಬಂದಿಯಿಂದಲೇ ಬ್ಯಾಂಕಿಗೆ ಸುಮಾರು 5 ಕೋಟಿ ರು.ನಷ್ಟು ವಂಚನೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ನಕಲಿ ಚಿನ್ನ ಇಟ್ಟು ಸಿಬ್ಬಂದಿಗಳಿಂದಲೇ ಬ್ಯಾಂಕಿಗೆ 5 ಕೋಟಿ ರು. ವಂಚನೆ!
ಚಿಕ್ಕಮಗಳೂರಿನಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಕೆ.ಎಂ.ರಸ್ತೆಯಲ್ಲಿರುವ ಬ್ಯಾಂಕ್ವೊಂದರ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಸೇರಿ ಒಟ್ಟು ಐದು ಮಂದಿ ಗ್ರಾಹಕರ ಹೆಸರಿನಲ್ಲಿ ಬ್ಯಾಂಕಿಗೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ
READ: ಇನೋವಾ ಕಾರಿನಲ್ಲಿ ಸಿಕ್ಕ ದಾಖಲೆಯಿಲ್ಲದ 8 ಕೋಟಿ ಯಾರದ್ದು ಗೊತ್ತಾ!? ಎಸ್ಪಿ ಹೇಳಿದ್ದೇನು?
ಅಸಲಿ ಚಿನ್ನ ನಕಲಿ ಚಿನ್ನ
ಗ್ರಾಹಕರಿಂದ ಅಸಲಿ ಚಿನ್ನ ಪಡೆದು ಅವರ ಹೆಸರಿನಲ್ಲಿ ನಕಲಿ ಚಿನ್ನವನ್ನು ಬ್ಯಾಂಕಿನ ಲಾಕರ್ನಲ್ಲಿಟ್ಟು, ಅಸಲಿ ಚಿನ್ನವನ್ನು ಬೇರೆಡೆಗೆ ಸಾಗಿಸಿದ್ದರು. ಬ್ಯಾಂಕಿನಲ್ಲಿರುವ ಸುಮಾರು 141 ಪ್ಯಾಕೆಟ್ಗಳ ಪೈಕಿ 140 ಪ್ಯಾಕೆಟ್ಗಳಲ್ಲಿ ನಕಲಿ ಚಿನ್ನವಿರುವುದು ಬೆಳಕಿಗೆ ಬಂದಿದೆ.
READ : ಕಣ್ಣು ಹಾಕಂಗಿಲ್ಲ ! ಬಾಳೆ ತೋಟಕ್ಕಿದೆ ಬೆಡಗಿಯರ ಫೋಟೋ ಕಾವಲು!
5 ಕೋಟಿಯಷ್ಟು ವಂಚನೆಯಾಗಿದೆ ಎಂದು ಆಂದಾಜಿಸಲಾಗಿದೆ. ಈ ಸಂಬಂಧ ಚಿಕ್ಕಮಗಳೂರು ಟೌನ್ ಠಾಣೆಯಲ್ಲಿ ದಾಖಲಾಗಿದ್ದು, 5 ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣ ಗ್ರಾಹಕರ ಗಮನಕ್ಕೆ ಬರುತ್ತಿದ್ದಂತೆ ಬ್ಯಾಂಕಿನಲ್ಲಿ ಠೇವಣಿ ಇಟ್ಟಿರುವ ಗ್ರಾಹಕರು ತಮ್ಮ ಹಣ ವಾಪಸ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ.