CHIKKAMAGALURU | POLICE PROTEST | WILD ELEPHANT Dec 2, 2023 | ನೆರೆಯ ಚಿಕ್ಕಮಗಳೂರು ಅಪರೂಪದ ಪ್ರತಿಭಟನೆಗಳಿಗೆ ಸಾಕ್ಷಿಯಾಗುತ್ತಿದೆ. ಪೊಲೀಸರು ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆ ವಕೀಲರು ಪ್ರತಿಭಟನೆ ನಡೆಸಿದರು. ಅಲ್ಲದೆ ಹಲ್ಲೆ ಮಾಡಿದ ಆರೋಪ ಹೊತ್ತಿರುವ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದರು.
READ : ನರಹಂತಕ ಕಾಡಾನೆ ಸಾವು? ಕಾರ್ಯಾಚರಣೆ ವೇಳೆ ಮೃತಪಟ್ಟ ಕಾಡಾನೆ!
ಈ ಮಧ್ಯೆ ಚಿಕ್ಕಮಗಳೂರು ಪೊಲೀಸರು ಸಹ ಚಿಕ್ಕಮಗಳೂರು ಟೌನ್ ಪೊಲೀಸ್ ಸ್ಟೇಷನ್ ಎದುರು ಪ್ರತಿಭಟನೆಯನ್ನು ನಡೆಸಿದ್ದಾರೆ. ಸ್ಟೇಷನ್ನೊಳಗೆ ನುಗ್ಗಿ ದಾಂಧಲೆ ವಕೀಲರು ದಾಂಧಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಪೊಲೀಸರು ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸಲಬೇಕು ಎಂದು ಆಗ್ರಹಿಸಿದ್ದಾರೆ. ಬರೋಬ್ಬರಿ 200 ಕ್ಕೂ ಹೆಚ್ಚು ಪೊಲೀಸರು ಪ್ರತಿಭಟನೆ ನಡೆಸ್ತಿರುವುದು ಕಾನೂನು ಸುವ್ಯವಸ್ಥೆಯ ಸೂಕ್ಷ್ಮತೆಯ ವಿಚಾರವಾಗಿದೆ.
ಚಿಕ್ಕಮಗಳೂರು ಎಸ್ಪಿಯವರು ಸಮ್ಮುಖದಲ್ಲಿಯೇ ತಮ್ಮ ಅಸಮಾಧಾನ ಹೊರಹಾಕಿದ ಪೊಲೀಸರ ಜೊತೆಗೆ ಈಗಾಗಲೇ ಅಮಾನತ್ತಾದ ಸಿಬ್ಬಂದಿಯ ಕುಟುಂಬಸ್ಥರು ಕೂಡು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಬಳಿಕ ಸಾರ್ವಜನಿಕರು ಹಾಗೂ ಹಲವು ಸಂಘಟನೆಗಳ ಸದಸ್ಯರು ಪೊಲೀಸರ ಪ್ರತಿಭಟನೆಗೆ ಸಾಥ್ ನೀಡಿದರು.
ನಂತರ ಪ್ರತಿಭಟನೆ ಇಲ್ಲಿನ ಹನುಮಂತಪ್ಪ ಸರ್ಕಲ್ಗೆ ಶಿಫ್ಟ್ ಆಯ್ತು. ಅಲ್ಲಿ ಹಲ್ಲೆಗೊಳಗಾದ ವಕೀಲರ ವಿರುದ್ಧ ಪೊಲೀಸರು ಆರೋಪ ಮಾಡಿದರು. ಪೊಲೀಸರ ಮೇಲೆ ಹಲ್ಲೆ ನಡೆಸಿ, ಹೆಲ್ಮೆಟ್ ವಿಚಾರವನ್ನು ಮಾತ್ರ ಹೇಳಲಾಗುತ್ತಿದೆ ಎಂದು ದೂರಿದ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದರೇ ಸಸ್ಪೆಂಡ್ ಶಿಕ್ಷೆ ನೀಡುವುದು ಎಷ್ಟು ಸರಿ ಎಂದು ಆಕ್ರೋಶ ಹೊರಹಾಕಿದರು.
ಅಲ್ಲದೆ ನಾಳೆ ಸೋಮವಾರ ಜಿಲ್ಲೆಯ ಎಲ್ಲಾ ಠಾಣೆ ಸಿಬ್ಬಂದಿ ಜಿಲ್ಲಾ ಕೇಂದ್ರಕ್ಕೆ ಬಂದು ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡುವ ಮೂಲಕ ಪೊಲೀಸರು ಪ್ರಕರಣವನ್ನು ಇನ್ನಷ್ಟು ಗಂಭೀರವಾಗಿಸಿದ್ದಾರೆ.
