SHIVAMOGGA | Jan 13, 2024 | ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್ಪೇಟೆ ಸಮೀಪ ನಿನ್ನೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವರು ನಿಧನರಾಗಿದ್ದಾರೆ ಎಂಬ ವರದಿ ಲಭ್ಯವಾಗಿದೆ.
ಸೂಡೂರು ಅರಣ್ಯ ಪ್ರದೇಶ
ರಿಪ್ಪನ್ಪೇಟೆ ಸಮೀಪ ಸಿಗುವ ಸೂಡೂರು ಅರಣ್ಯ ಪ್ರದೇಶದ ಬಳಿ ಬರುವ ಟರ್ನಿಂಗ್ ನಲ್ಲಿ ಮಹೀಂದ್ರಾ ಕಂಪನಿಗೆ ಸೇರಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಮಹೀಂದ್ರಾ XYLO ಕಾರು
ಮಹೀಂದ್ರಾ XYLO ಕಾರು ಸೂಡೂರು ಪೋಸ್ಟ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೂರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಅವರನ್ನ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಗೆ ದಾಖಲಿಸಲು ಕರೆದೊಯ್ಯುತ್ತಿರುವ ಸಂದರ್ಭದಲ್ಲಿ ಓರ್ವರು ಮೃತಪಟ್ಟಿದ್ದಾರೆ ಎನ್ನಲಾಗಿದೆ..
ರಿಪ್ಪನ್ ಪೇಟೆ ಪೊಲೀಸ್ ಸ್ಟೇಷನ್
ಮೃತರು ಭದ್ರಾವತಿ ತಾಲ್ಲೂಕಿನ ಬಿಳಕಿ ಯವರು ಎಂದು ತಿಳಿದುಬಂದಿದೆ. ಇವರು ಕೆಂಚನಾಲ ದಲ್ಲಿರುವ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಹೋಗಿ ಹರಕೆ ಕುರಿ ಸಲ್ಲಿಸಿ ವಾಪಸ್ ಆಗುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ಸದ್ಯ ಘಟನೆ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಸ್ಟೇಷನ್ ನಲ್ಲಿ ಕೇಸ್ ದಾಖಲಾಗಿದೆ




