ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶ ! ಶಿವಮೊಗ್ಗಕ್ಕೆ ಡಿಸಿಎಂ ಎಂಟ್ರಿ!

Shivamogga Feb 24, 2024    ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಆರಂಭಗೊಳ್ಳುತ್ತಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್​   ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ , ನಿಲ್ದಾಣಕ್ಕೆ ಬಂದಿಳಿಯುತ್ತಲೇ ಡಿಸಿಎಂ ಅವರಿಗೆ ಗಾಡ್ ಆಫ್ ಹಾನರ್ ನೀಡಲಾಯ್ತು. 

Malenadu Today Shivamogga

ಬೆಂಗಳೂರಿನಿಂದ ಬಂದಿಳಿದ ಡಿಕೆ ಶಿವಕುಮಾರ್​ರವರನ್ನು  ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾಂಗ್ರೆಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಹೆಚ್​.ಎಸ್​ ಸುಂದರೇಶ್​  ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದಾರೆ. ಇನ್ನೇನು ಕೆಲವು ಹೊತ್ತಿನಲ್ಲಿ ಅಲ್ಲಮಪ್ರಭು (ಫ್ರೀಡಂಪಾರ್ಕ್​) ಮೈದಾನಕ್ಕೆ ಅವರು ಆಗಮಿಸಲಿದ್ದಾರೆ. 

Malenadu Today Shivamogga

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತಿ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ.  

Malenadu Today Shivamogga

Malenadu Today Shivamogga

Leave a Comment