KARNATAKA NEWS/ ONLINE / Malenadu today/ Apr 27, 2023 GOOGLE NEWS
ಶಿವಮೊಗ್ಗ/ ಶಿವಮೊಗ್ಗದ ನಿಧಿಗೆ ಕೆರೆಯ ಬಳಿಯಲ್ಲಿ ಇವತ್ತು ಬೆಳಗಿನ ಜಾವ ಆಕ್ಸಿಡೆಂಟ್ ಸಂಭವಿಸಿದೆ. ಇಲ್ಲಿನ ಕೆರೆಯ ದಂಡೆ ಬಳಿಯಲ್ಲಿ ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ಸಿಗಂದೂರಿಗೆ ಹೋಗುತ್ತಿತ್ತು.
ಓದಿ / ಶಿವಮೊಗ್ಗದಲ್ಲಿ ಬಸ್ ಹತ್ತಿದ ಎಸ್ಪಿ ಮಿಥುನ್ ಕುಮಾರ್, ಡಿಸಿ ಡಾ.ಆರ್ ಸೆಲ್ವಮಣಿ! ವಿವರ ಇಲ್ಲಿದೆ
ಬೆಳಗ್ಗಿನ ಜಾವ ನಿಧಿಗೆ ಕೆರೆಯ ಬಳಿಯ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಇವರೆಲ್ಲರೂ ಎರಡು ಬಸ್ಗಳಲ್ಲಿ ಬೆಂಗಳೂರಿನಿಂದ ಸಿಗಂದೂರಿಗೆ ಬರುತ್ತಿದ್ರು. ಹೈವೆಯಲ್ಲಿ ರಿಪೇರಿ ಕೆಲಸ ನಡೆಯುತ್ತಿದ್ದು, ಅಲ್ಲಲ್ಲಿ ಡೈವರ್ಷನ್ ಮಾಡಲಾಗಿದೆ. ನಸುಕಿನಲ್ಲಿ ಚಾಲಕನಿಗೆ ಈ ಡೈವರ್ಷನ್ನಲ್ಲಿ ಬಸ್ ನಿಯಂತ್ರಣಕ್ಕೆ ಆಕ್ಸಿಡೆಂಟ್ ಆಗಿದೆ ಎನ್ನಲಾಗುತ್ತಿದೆ.
ಇದನ್ನು ಕೂಡ ಓದಿ- ಶಿವಮೊಗ್ಗದಲ್ಲಿ ಬಸ್ ಹತ್ತಿದ ಎಸ್ಪಿ ಮಿಥುನ್ ಕುಮಾರ್, ಡಿಸಿ ಡಾ.ಆರ್ ಸೆಲ್ವಮಣಿ! ವಿವರ ಇಲ್ಲಿದೆ
ಇನ್ನೂ ಘಟನೆಯಲ್ಲಿ ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೂ ಬಸ್ನ ಕಿಟಿಕಿ ಗಾಜುಗಳು ಸಂಪೂರ್ಣವಾಗಿ ಜಖಂ ಆಗಿದೆ. ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಓದಿ / ಡಿಪ್ಲೋಮೋ ಕೋರ್ಸ್ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 % ಉದ್ಯೋಗಾವಕಾಶ/ ವಿವರ ಇಲ್ಲಿದೆ
Malenadutoday.com Social media