ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಬೈಕ್ನಲ್ಲಿ ಬರುತ್ತಿದ್ದವರನ್ನು ಅಡ್ಡಗಟ್ಟಿ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಆತನ ಬೈಕ್ ಕಿತ್ತುಕೊಂಡು ಹೋಗಲಾಗಿದೆ. ಡಿಸೆಂಬರ್ 06 ರಂದು ನಡೆದ ಘಟನೆ ಸಂಬಂಧ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಭದ್ರಾವತಿ ಮಾಚೇನಹಳ್ಳಿ ಸಮೀಪ ಈ ಘಟನೆ ನಡೆದಿದ್ದು, ಶಿವಮೊಗ್ಗ ನಗರದಿಂದ ಭದ್ರಾವತಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಬೈಕ್ ಸವಾರನನ್ನು ಕಪ್ಪು ಬಣ್ಣದ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿ ಆತನ ಬೈಕ್ ಬಲವಂತವಾಗಿ ಕಿತ್ತುಕೊಂಡು ಹೋಗಿದ್ದಾರೆ.

ಪತ್ನಿ ವಿಚಾರದಲ್ಲಿ ಪತಿರಾಯನಿಗೆ 2 ವರ್ಷ ಶಿಕ್ಷೆ! ಸಾಗರ ಕೋರ್ಟ್ನಲ್ಲಿ ತೀರ್ಪು
ನಡೆದ ಘಟನೆಯ ಪೂರ್ಣ ವಿವರ
ಶಿಕಾರಿಪುರ ತಾಲ್ಲೂಕಿನ ಮಂಚಿಕೊಪ್ಪ ಗ್ರಾಮದ ನಿವಾಸಿಯೊಬ್ಬರು ಡಿಸೆಂಬರ್ 5 ರಂದು ರಾತ್ರಿ 8:00 ಗಂಟೆಗೆ ಹೋಂಡಾ ಹಾರ್ನೆಟ್ ಬೈಕ್ನಲ್ಲಿ ಭದ್ರಾವತಿಗೆ ತೆರಳುತ್ತಿದ್ದರು. ಈ ವೇಳೆ ಶಿವಮೊಗ್ಗದ ಕಡೆಯಿಂದ ಅವರನ್ನು ಹಿಂಬಾಲಿಸಿದ ಕಪ್ಪು ಬಣ್ಣದ ಹೋಂಡಾ ಆಸೆಂಟ್ (HONDA ACCENT) ಕಾರು ಮಾಚೇನಹಳ್ಳಿ ಬಳಿ ಟಿ.ಎಂ.ಎ.ಇ.ಎಸ್ ಆಯುರ್ವೇದಿಕ್ ವೈದ್ಯಕೀಯ ಕಾಲೇಜು ಹತ್ತಿರ ಬೈಕ್ನ್ನು ಅಡ್ಡಗಟ್ಟಿದೆ. ಬಳಿಕ ಕಾರಿನಲ್ಲಿದ್ದವರು, ಮಾಲೀಕನಿಂದ ಬೈಕ್ ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಸಂತ್ರಸ್ತರು ನೀಡಿದ ದೂರಿನನ್ವಯ ಬಲವಂತವಾಗಿ ಬೈಕನ್ನು ಕಿತ್ತುಕೊಂಡು ಹೋದ ಮೂವರು ಅಪರಿಚಿತ ಆರೋಪಿಗಳ ವಿರುದ್ಧ ಭದ್ರಾವತಿ ನ್ಯೂ ಟೌನ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
