ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ರಾಜ್ಯ ರಾಜಕಾರಣದ ಗೊಂದಲದ ಪ್ರಶ್ನೆಗಳ ನಡುವೆ ಶಿವಮೊಗ್ಗದಲ್ಲಿ ನಿನ್ನೆ ದಿನ ಮಾತನಾಡಿದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ನಾಯಕರು ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದು ಇನ್ನಷ್ಟು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ನಿನ್ನೆ ದಿನ ಮಾತನಾಡಿ, ಸಿಎಂ, ಡಿಸಿಎಂ ಮತ್ತೆ ದೆಹಲಿಗೆ ಹೋಗಿದ್ದಾರೆ. ಮತ್ತೇನು ವಿಚಾರ ಎಂಬುದು ನಮಗೆ ತಿಳಿದಿಲ್ಲ. ಎಂದರು. ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಆ ರೀತಿ ಹೇಳಿಕೆ ನೀಡಬಾರದಿತ್ತು. ಅವರೇ ಔಟ್ ಗೋಯಿಂಗ್ ಅಧ್ಯಕ್ಷರಾಗಿದ್ದಾರೆ. ನನ್ನ ಆತ್ಮೀಯ ಸ್ನೇಹಿತರೇ ಬಿಜೆಪಿಯಲ್ಲಿ ಇದ್ದಾರೆ. ಅವರೆಲ್ಲರೂ ಇವರ ನಿರ್ಗಮನಕ್ಕೆ ಕಾಯುತ್ತಿದ್ದಾರೆ. 2 ತಿಂಗಳಲ್ಲಿ ಅಧಿಕಾರದಿಂದ ಕೆಳಗೆ ಇಳಿಯುತ್ತಾರೆ ಎಂದು ಹೇಳಿದ್ದಾರೆ. ಸದ್ಯದಲ್ಲಿಯೇ ಸಿದ್ದರಾಮಯ್ಯ ಅಲ್ಲ, ವಿಜಯೇಂದ್ರ ಔಟ್ ಗೋಯಿಂಗ್ ಆಗುತ್ತಾರೆ ಎಂದರು.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ,
ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಬಿ.ವೈ. ವಿಜಯೇಂದ್ರ ವಿರುದ್ಧ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ Cabinet Expansion Soon MLA Belur Gopalakrishna Slams BY Vijayendra Over Outgoing CM Remark

