ಶಿವಮೊಗ್ಗ: ಸಿದ್ದೇಶ್ವರ ನಗರದ 4 ನೇ ಅಡ್ಡರಸ್ತೆಯಲ್ಲಿರುವ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣವಾಗಿ ಹಾನಿಗೊಳಗಾಗಿರುವ ಘಟನೆ ನಿನ್ನೆ ಬೆಳಿಗ್ಗೆ ನಡೆದಿದೆ.

ಎನ್ಐಎ ಅಧಿಕಾರಿಗಳ ಹೆಸರಲ್ಲಿ ಶಿವಮೊಗ್ಗದ ವ್ಯಕ್ತಿಗೆ ಬಂತು ಫೋನ್, ನಂತರ ಏನಾಯ್ತು.?
ನಿನ್ನೆ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಧರ್ಮಪ್ಪ ಎಂಬುವವರ ಮನೆಯ ಸಿಲಿಂಡರ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಸ್ಪೋಟಗೊಂಡಿದೆ. ಇದರ ಪರಿಣಾಮವಾಗಿ ಮನೆಯ ಮೇಲ್ಚಾವಣಿ ಹಾರಿ ಹೋಗಿ ತೀವ್ರವಾಗಿ ಹಾನಿ ಉಂಟಾಗಿದೆ. ಅದೃಷ್ಟವಶಾತ್ ಧರ್ಮಪ್ಪ ಮನೆಯರ್ಯಾರು ಸಹ ಒಳಗೆ ಇಲ್ಲದೆ ಇದ್ದುದ್ದರಿಂದ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸಿಲಿಂಡರ್ ಸ್ಪೊಟದಿಂದ ಲಕ್ಷಾಂತರ ರುಪಾಯಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.
Cylinder Blast in Shivamogga’s Siddeshwara Nagara
