ಬೆಜ್ಜವಳ್ಳಿ : ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಕರ ಸಂಕ್ರಾಂತಿ ಉತ್ಸವವು ಅತ್ಯಂತ ಸಡಗರದಿಂದ ನಡೆಯುತ್ತಿದೆ. . ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ನಟ ಡಾ. ಶಿವರಾಜ್ ಕುಮಾರ್, ಗೀತಾ ಶಿವರಾಜ್ಕುಮಾರ್ ಹಾಗೂ ಆಧ್ಯಾತ್ಮಿಕ ಗುರುಗಳಾದ ಅವಧೂತ ವಿನಯ್ ಗುರೂಜಿ ಅವರು ಆಗಮಿಸಿದ್ದಾರೆ.

ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ
ಪ್ರತಿ ವರ್ಷದಂತೆ ಈ ಬಾರಿಯೂ ಉತ್ಸವದ ವೇಳೆ ಆಕಾಶದಲ್ಲಿ ಗರುಡ ದರ್ಶನವಾಗಿದ್ದು ನೂರಾರು ಭಕ್ತರು ದರ್ಶನವನ್ನು ಪಡೆದರು. ಇನ್ನೂ ಕ್ಷೇತ್ರದ ಸಂಪ್ರದಾಯದಂತೆ ನಟ ಶಿವರಾಜ್ ಕುಮಾರ್ ಅವರುಇರುಮುಡಿ ಹೊತ್ತು, ಅಯ್ಯಪ್ಪ ಸ್ವಾಮಿಗೆ ಪವಿತ್ರ ಅಭಿಷೇಕವನ್ನು ನೆರವೇರಿಸಿದರು.
ಈ ಬಾರಿಯ ಉತ್ಸವದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ಗಾಯಕ ನವೀನ್ ಸಜ್ಜು ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಬೇಕಿತ್ತು. ಆದರೆ, ಅನಿವಾರ್ಯ ಕಾರಣಗಳಿಂದಾಗಿ ಅವರು ಈ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗಲಿಲ್ಲ.
Shivanna Performs Irumudi Puja at Bejjavalli Ayyappa Temple
