ಸಾಗರ: ಬರೋಬ್ಬರಿ 33 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಕೊನೆಗೂ ಪತ್ತೆಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಾಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ
ಪ್ರಕರಣದ ಹಿನ್ನೆಲೆ
1985ರಲ್ಲಿ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗುನ್ನೆ ಸಂಖ್ಯೆ 29/1985, ಕಲಂ 448 (ಮನೆ ಅತಿಕ್ರಮಣ) ಮತ್ತು 323 (ಹಲ್ಲೆ) ಪ್ರಕರಣದ ಆರೋಪಿಯೊಬ್ಬ (ಆಗ 18 ವರ್ಷ, ಈಗ 60 ವರ್ಷ), ಕಳೆದ ಮೂರು ದಶಕಗಳಿಂದಲೂ ನ್ಯಾಯಾಲಯದ ವಿಚಾರಣೆಗೆ ಗೈರುಹಾಜರಾಗಿ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಸಾಗರದ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.

ಮೊಬೈಲ್ ಕಳೆದುಹೋಗಿದೆಯೇ? ಈಗ ರಪ್ಪಾ ಸಿಗ್ತದೆ ಫೋನ್! ಹೀಗಿದೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ
ಆರೋಪಿಯ ಪತ್ತೆಗಾಗಿ ಸಾಗರ ಉಪ ವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡವೊಂದನ್ನು ರಚಿಸಲಾಗಿತ್ತು. ಈ ತಂಡದಲ್ಲಿ ಎಎಸ್ಐ ಪರಶುರಾಮ್, ಹೆಚ್ಸಿ ರತ್ನಾಕರ, ತಾರಾನಾಥ, ಶೇಕ್ ಫೈರೋಜ್ ಅಹಮದ್ ಹಾಗೂ ಪಿಸಿ ವಿಶ್ವನಾಥ, ರಾಮನಗೌಡ ಪಾಟೀಲ್ ಮತ್ತು ಜಗದೀಶ್ ಇದ್ದರು. ತಂಡವು ತಾಂತ್ರಿಕ ಮಾಹಿತಿ ಹಾಗೂ ಹಳೆಯ ದಾಖಲೆಗಳನ್ನು ಆಧರಿಸಿ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಯಿತು .
ಪತ್ತೆಯಾದ ಕೆ.ಪಿ. ಮಯಡ್ಡಿಯನ್ನು ಸಾಗರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡ ಆರೋಪಿಯು ದಂಡವನ್ನು ಪಾವತಿಸಿದನು.
