ಶಿವಮೊಗ್ಗ : ಶಿವಮೊಗ್ಗದ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆ 15 ರಂದು ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿರುವ ರಾಷ್ಟ್ರಮಟ್ಟದ ಬೃಹತ್ ಟಗರು ಕಾಳಗಕ್ಕೆ ಸಿದ್ಧತೆಗಳು ಭರ್ಜರಿಯಾಗಿ ನಡೆಯುತ್ತಿವೆ. ಈ ಕ್ರೀಡಾಕೂಟದ ವಿಶೇಷ ಆಕರ್ಷಣೆಯಾದ ಕಂಬಳಿಯ ಜುಲವನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ನಿಕಟಪೂರ್ವ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಅನಾವರಣಗೊಳಿಸಿದರು.
ಸಂಗೊಳ್ಳಿ ರಾಯಣ್ಣ, ವೀರ ಶಿವಪ್ಪ ನಾಯಕ, ಭಗೀರಥ ಹಾಗೂ ವೀರ ಸಿಂಧೂರ ಲಕ್ಷ್ಮಣ ಬಿರುದಾಂಕಿತ ಈ ಜುಲವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ನಲಪಾಡ್ ಅವರು, ಗ್ರಾಮೀಣ ಕ್ರೀಡೆಗಳು ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಅವಿಭಾಜ್ಯ ಅಂಗವಾಗಿವೆ. ನಮ್ಮೂರ ಬಳಗ ಹಮ್ಮಿಕೊಂಡಿರುವ ಈ ಟಗರು ಕಾಳಗವು ಜನರ ಉತ್ಸಾಹವನ್ನು ಹೆಚ್ಚಿಸಿದೆ. ಶಿವಮೊಗ್ಗದ ಮಾರಿಕಾಂಬಾ ಜಾತ್ರೆಯ ಅಂಗವಾಗಿ ನಡೆಯುವ ಈ ಕ್ರೀಡಾಕೂಟವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

Harris Nalapad Unveils Tagaru Kalaga Kambali Jula

