ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲ್ಲೂಕಿನ ಬಂಡಾರಹಳ್ಳಿ ಗ್ರಾಮದ ಮಂಜೇಶ್ ಎಂಬುವವರು ಕಳೆದ ಆರು ವರ್ಷಗಳ ಹಿಂದೆ ಕಾಣೆಯಾಗಿದ್ದು, ಇದೀಗ ನ್ಯೂಟೌನ್ ಪೊಲೀಸರು ಅವರನ್ನು ಯಶಸ್ವಿಯಾಗಿ ಪತ್ತೆಹಚ್ಚಿ ಪೋಷಕರಿಗೆ ಒಪ್ಪಿಸಿದ್ದಾರೆ.
ಶಿವಮೊಗ್ಗದಲ್ಲಿ ರಾಷ್ಟ್ರ ಮಟ್ಟದ ಟಗರುಗಳ ಭರ್ಜರಿ ಕಾಳಗ: ಹೇಗಿತ್ತು ಗೊತ್ತಾ..?
ಹೌದು, ಭದ್ರಾವತಿಯ 20 ವರ್ಷದ ಯುವಕ ಮಂಜೇಶ್ ಕಳೆದ 2019 ರಲ್ಲಿ ನಾಪತ್ತೆಯಾಗಿದ್ದರು. ಈ ಸಂಬಂಧ ಮಗನನ್ನು ಹುಡುಕಿಕೊಡುವಂತೆ ಪೋಷಕರು ಅಂದು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಬಗ್ಗೆ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 132/ 2019 ಕಲಂ ಮನುಷ್ಯ ಕಾಣೆ ಪ್ರಕರಣ ವರದಿಯಾಗಿ ತನಿಖೆ ನಡೆಯುತ್ತಿತ್ತು. ಇದೀಗ ನ್ಯೂಟೌನ್ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡವು ದಿನಾಂಕ 19-02-2026 ರಂದು ಮಂಜೇಶ್ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪತ್ತೆ ಮಾಡಿದ್ದಾರೆ.
ಹಿರಿಯೂರಿನಿಂದ ಪತ್ತೆ ಮಾಡಲಾದ ವ್ಯಕ್ತಿಯನ್ನು ಪೊಲೀಸರು ಭದ್ರಾವತಿಗೆ ಕರೆತಂದು ಅವರ ಪೋಷಕರಿಗೆ ಹಸ್ತಾಂತರಿಸಿದ್ದಾರೆ.
Missing Man Bhadravathi Found After 6 Years
