ಹೊಳೆಹೊನ್ನೂರು: ಸಾರ್ವಜನಿಕವಾಗಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ, ಗುಂಪುಕಟ್ಟಿಕೊಂಡು ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಭದ್ರಾವತಿ ಕೋರ್ಟ್ ಹತ್ತು ಮಂದಿಗೆ ತಲಾ ಒಂದು ವರ್ಷ, 8 ಸಾವಿರ ದಂಡ ವಿಧಿಸಿದೆ.
ಶಿವಮೊಗ್ಗ: ಫುಟ್ಪಾತ್ ಅತಿಕ್ರಮಣ ತೆರವುಗೊಳಿಸಿದ ಮಹಾನಗರ ಪಾಲಿಕೆ ಮತ್ತು ಟ್ರಾಫಿಕ್ ಪೊಲೀಸರು.
ಭದ್ರಾವತಿ ಹಂಚಿನ ಸಿದ್ದಾಪುರದ ಘಟನೆ
2019ರ ಮಾರ್ಚ್ 8ರಂದು ನಡೆದ ಘಟನೆಯಿದು. ಶಿವರಾತ್ರಿ ಹಬ್ಬದ ದಿನ ಹಂಚಿನ ಸಿದ್ಧಾಪುರ ಗ್ರಾಮದ ನಿವಾಸಿ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ರುದ್ರೇಶ್ ಹಾಗೂ ಇತರರು ಸಂತ್ರಸ್ತ ಮಹಿಳೆಯನ್ನು ಅವಹೇಳನ ಮಾಡಿದ್ದರು. ಇದನ್ನ ಪ್ರಶ್ನಿಸಿದ್ದಕ್ಕೆ ಸಂತ್ರಸ್ತೆಯ ಮನೆಗೆ ನುಗ್ಗಿ ಅವಾಚ್ಯವಾಗಿ ನಿಂಧಿಸಿದ್ದರು. ಅಲ್ಲದೆ ಮೈಕೈ ಹಿಡಿದು ಎಳೆದಾಡಿ, ಸಿಸಿ ಕ್ಯಾಮೆರಾ ಹಾಗೂ ವಾಹನದ ಗ್ಲಾಸ್ ಪುಡಿಮಾಡಿದ್ದಷ್ಟೆ ಅಲ್ಲದೆ ಗಲಾಟೆಯನ್ನು ತಪ್ಪಿಸಲು ಬಂದವರ ಮೇಲೆಯು ಹಲ್ಲೆ ನಡೆಸಿದ್ದರು ಎಂದು ಸಂತ್ರಸ್ತೆ ಹೊಳೆಹೊನ್ನೂರು ಪೊಲೀಸ್ ಠಾಣೆಗೆ ಕಂಪ್ಲೆಂಟ್ ಮಾಡಿದ್ದರು.
ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ನಲ್ಲಿ ಕೇಸ್
ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಅಂದಿನ ತನಿಖಾಧಿಕಾರಿ ಎಎಸ್ಐ ಕೃಷ್ಣ ನಾಯ್ಕ್ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು.
ಭದ್ರಾವತಿಯ 1ನೇ ಎ.ಸಿ.ಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ವಿಚಾರಣೆ
ಭದ್ರಾವತಿಯ 1ನೇ ಎ.ಸಿ.ಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಕೇಸ್ನ ವಿಚಾರಣೆ ನಡೆಸಿದ ನ್ಯಾ. ರವಿಕುಮಾರ್ ವಿ. ಅಂತಿಮವಾಗಿ ಪ್ರಕರಣದಲ್ಲಿ ಎಲ್ಲಾ ಹತ್ತು ಮಂದಿ ಆರೋಪಿಗಳನ್ನ ತಪ್ಪಿತಸ್ತರೆಂದು ತೀರ್ಪು ನೀಡಿದರು. ಅಲ್ಲದೆ ತಲಾ 1 ವರ್ಷ ಜೈಲು ಶಿಕ್ಷೆ ಹಾಗೂ ತಲಾ 8000 ರೂಪಾಯಿ ದಂಡ ವಿಧಿಸಿದ್ದಾರೆ. ದಂಡದ ಮೊತ್ತದ ಪೈಕಿ ಒಟ್ಟು 80,000 ರೂಪಾಯಿಗಳನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಸೂಚಿಸಿದ್ದಾರೆ. ಈ ಪ್ರಕರಣದಲ್ಲಿ ಕೇಸ್ನ ಪರವಾಗಿ, ಅಪರ ಸರ್ಕಾರಿ ಅಭಿಯೋಜಕ ತಿಪ್ಪೇಶ್ ರಾವ್ ಅವರು ವಾದ ಮಂಡಿಸಿದ್ದರು.
Bhadravati Court Sentences 10 Individuals to Jail

Bhadravati Court Sentences 10 Individuals to Jail

