ಕುಂದಾಪುರದಿಂದಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಹುಲಿಕಲ್ ಘಾಟಿಯಲ್ಲಿ ನಡೆದಿದೆ.
ಶಿವಮೊಗ್ಗ ಮಾರಿಕಾಂಬಾ ಜಾತ್ರೆ ಆರಂಭ: ಭಕ್ತಸಮೂಹಕ್ಕೆ ಮಾರವ್ವನ ಮೊದಲ ದರ್ಶನ
ದುರ್ಗಾಂಬ ಎಂಬ ಹೆಸರಿನ ಖಾಸಗಿ ಬಸ್ ಇಂದು ಮದ್ಯಾಹ್ನ ಕುಂದಾಪುರದಿಂದ ಶಿವಮೊಗ್ಗ ಕ್ಕೆ ತೆರಳುತ್ತಿತ್ತು. ಈ ವೇಳೆ ಹುಲಿಕಲ್ ಘಾಟ್ ಬಳಿ ಬಸ್ನಲ್ಲಿ ಆಕಸ್ಮಿಕವಾಗಿ ಕೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಚಾಲಕ ಹಾಗೂ ಪ್ರಯಾಣಿಕರು ಬಸ್ನಿಂದ್ ಕೆಳಗಿಳಿದಿದ್ದಾರೆ. ಇದರ ಪರಿಣಾಮ ಪ್ರಯಾಣಿಕರಿಗೆ ಯಾವುದೇ ಹಾನಿಯಾಲಿಲ್ಲ, ಆದರೆ ಬಸ್ ಬೆಂಕಿಗಾಹುತಿಯಾಗಿದೆ.ಘಟನೆ ಕುರಿತಾದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
Private Bus Catches Fire in Hulikal Ghat


