ಭದ್ರಾವತಿ : ಕಾಮಗಾರಿ ನಡೆಯುತ್ತಿದ್ದ ಸೇತುವೆಗೆ ಬೈಕ್ ಸವಾರನೊಬ್ಬ ಆಕಸ್ಮಿಕವಾಗಿ ಬಿದ್ದ ಘಟನೆ ಭದ್ರಾವತಿ ಹುತ್ತ ಕಾಲೋನಿ ಫಿಶ್ ಮಾರುಕಟ್ಟೆ ಹತ್ತಿರ ನಿನ್ನೆ ರಾತ್ರಿ ಸಂಭವಿಸಿದೆ. ಈ ಸಂದರ್ಭದಲ್ಲಿ ಕೂಡಲೇ ಸ್ಥಳಕ್ಕಾಗಮಿಸಿದ ಇ ಆರ್ ವಿ ಪೊಲೀಸರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಶಿವಮೊಗ್ಗ ಬಸ್ಟ್ಯಾಂಡ್ನಲ್ಲಿ ಇದೇ ಮೊದಲು, LED ಪರದೆಯಲ್ಲಿ ಬಜೆಟ್ ನೇರ ಪ್ರಸಾರ
ಘಟನೆ ವಿವರ
ನಿನ್ನೆ ಅಂದರೆ ಮಾರ್ಚ್ 09 ರ ರಾತ್ರಿ ಸುಮಾರಿಗೆ ಬೈಕ್ ಸವಾರನೊಬ್ಬ ಅತಿ ವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ಬಂದು ಕಾಮಗಾರಿ ನಡೆಯುತ್ತಿರುವ ಸೇತುವೆಯ ಹತ್ತಿರ ಚಾನೆಲ್ ನೀರಿಗೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಇ ಆರ್ ವಿ ಪೊಲೀಸರು ಸಾರ್ವಜನಿಕರ ಸಹಾಯದಿಂದ ಚಾನಲ್ಗೆ ಬಿದ್ದಿದ್ದ ವ್ಯಕ್ತಿಯನ್ನು ಮೇಲಕ್ಕೆ ಎತ್ತಿ, ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇ ಆರ್ ವಿ ಪೊಲೀಸರು ಈ ಕಾರ್ಯಕ್ಕೆ ಶಿವಮೊಗ್ಗದ ಎಸ್ ಪಿ ನಿಖಿಲ್ ಬಿ ಅಭಿನಂದಿಸಿದ್ದಾರೆ.
Bhadravati Police Rescue Biker from Bridge Canal


