SHIMOGA NEWS LIVE

ಕಂಬ ತಪ್ಪಿಸಲು ಹೋಗಿ ಚರಂಡಿಗೆ ಉರುಳಿದ ಕಾರು

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಸಾಗರ ಪೇಟೆಯ ಗಣಪತಿ ಕೆರೆ ಹತ್ರ ನಿನ್ನೆ ಮತ್ತೊಂದು ಅವಗಢ ಸಂಭವಿಸಿದೆ. ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಗಣಪತಿ ಕೆರೆ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಸಂದರ್ಭದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ನೇರವಾಗಿ ಚರಂಡಿಗೆ ಉರುಳಿದೆ. ಶಿವಮೊಗ್ಗದಿಂದ ಶಿರಸಿ ಕಡೆಗೆ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ.

ಚರಂಡಿಗೆ ಉರುಳಿದ ಕಾರು

ರಸ್ತೆ ಅಗಲೀಕರಣ ಕೆಲಸ ನಡೆಯುತ್ತಿರುವ ಈ ಭಾಗದಲ್ಲಿ ವಾಹನಗಳು ಅಪಘಾತಕ್ಕೀಡಾಗುತ್ತಲೇ ಇವೆ. ಇದಕ್ಕೆ ನಿನ್ನೆಯ ಘಟನೆ ಹೊಸದೊಂದು ಉದಾಹರಣೆಯಾಗಿದೆ. ನಿನ್ನೆಯ ಘಟನೆಗೆ ಹಳೆಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸದಿರುವುದೇ ಕಾರಣ ಎನ್ನಲಾಗುತ್ತಿದೆ. ಇನ್ನೂ ಘಟನೆಯಲ್ಲಿ ಕಾರು ಪಲ್ಟಿಯಾಗಿ ಜಖಂಗೊಂಡಿದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ಕಂಬ ತಪ್ಪಿಸಲು ಹೋಗಿ ಚರಂಡಿಗೆ ಉರುಳಿದ ಕಾರು Car Plunges into Ditch in Sagar
ಕಂಬ ತಪ್ಪಿಸಲು ಹೋಗಿ ಚರಂಡಿಗೆ ಉರುಳಿದ ಕಾರು Car Plunges into Ditch in Sagar

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ