ಶಿವಮೊಗ್ಗ: ಮಹಿಳೆಯರು ಸಭೆಗೆ ಹೋಗ್ತಿದ್ದಾಗ ನಡೀತು ಈ ಘಟನೆ, 24 ಗಂಟೆಯಲ್ಲಿ ಇಬ್ಬರ ಬಂಧನ

ಶಿವಮೊಗ್ಗ: ಹೊಳಲೂರು ಗ್ರಾಮದ ಸರ್ಕಾರಿ ಆಸ್ಪತ್ರೆ ಬಳಿ ಮಹಿಳೆಯ ಸರವನ್ನು ಕಿತ್ತು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಥೈಲ್ಯಾಂಡ್ ವರ್ಲ್ಡ್ ಮಾಸ್ಟರ್ಸ್ ಸ್ವಿಮ್ಮಿಂಗ್​ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಶಿವಮೊಗ್ಗದ ಪಶುವೈದ್ಯ! ಯಾರು ನೋಡಿ ವಿಶ್ ಮಾಡಿ

ಘಟನೆಯ ವಿವರ

 ಏಪ್ರಲ್​ 24 ರಂದು ಶಿವಮೊಗ್ಗ ನಗರದ ಇಬ್ಬರು ಮಹಿಳೆಯರು ಹೊಳಲೂರು ಗ್ರಾಮ ಪಂಚಾಯ್ತಿಯ ಮಹಿಳಾ ಸಂಘದ ಸಭೆಗೆ ತೆರಳುತ್ತಿದ್ದರು. ಈ ವೇಳೆ ಸರ್ಕಾರಿ ಆಸ್ಪತ್ರೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ ಕೊರಳಿನಲ್ಲಿದ್ದ ಸುಮಾರು 35 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದನು. ಈ ಬಗ್ಗೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಅವರ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಇನ್ಸ್‌ಪೆಕ್ಟರ್ ರಾಘವೇಂದ್ರ ಕಾಂಡಿಕೆ ನೇತೃತ್ವದ ವಿಶೇಷ ತಂಡವು ತನಿಖೆ ಕೈಗೊಂಡಿತ್ತು. ಕಾರ್ಯಾಚರಣೆ ನಡೆಸಿದ ತಂಡವು  ಏಪ್ರಿಲ್​ 24 ರಂದು ಆರೋಪಿಗಳಾದ ಮನೋಜ್ ಶಿರಮಣ ಸಿ. ಮತ್ತು ವಿಜಯ್ ಕುಮಾರ್ ಎಂಬುವವರನ್ನು ಬಂಧಿಸಿದೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ 40,000/- ರೂ. ಮೌಲ್ಯದ ಸ್ಪ್ಲೆಂಡರ್ ಬೈಕ್ ಹಾಗೂ ಸುಮಾರು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. 

 Shivamogga Rural Police Arrest Chain Snatchers

 Shivamogga Rural Police Arrest Chain Snatchers
Shivamogga Rural Police Arrest Chain Snatchers