ಹೆಲಿಕಾಪ್ಟರ್ನಲ್ಲಿ ಶಿವಮೊಗ್ಗಕ್ಕೆ ಬಂದಿಳಿದ ಸಚಿವ ಬಿ.ಎಸ್. ಸುರೇಶ್
ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಆಯೋಜಿಸಲಾಗಿರುವ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ (ಹಂತ-2) ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮಕ್ಕಾಗಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ಅವರು ಇಂದು ಹೆಲಿಕಾಪ್ಟರ್ ಮೂಲಕ ಆಗಮಿಸಿದರು.
ಹೆಲಿಪ್ಯಾಡ್ನಲ್ಲಿ ಬಂದಿಳಿದ ಸಚಿವರನ್ನು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಹೂಗುಚ್ಛ ನೀಡಿ ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದರು. ಈ ಮಹತ್ವದ ಅಭಿವೃದ್ಧಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಚಿವರ ಆಗಮನದ ಎಕ್ಸ್ಕ್ಲೂಸಿವ್ ದೃಶ್ಯ ಹಾಗೂ ಸ್ಥಳೀಯ ನಾಯಕರು ಬರಮಾಡಿಕೊಂಡ ಕ್ಷಣಗಳನ್ನು ಕ್ಯಾಮರಾದಲ್ಲಿ ಸೆರೆಯಾಗಿದೆ.
BS Suresh helicopter landing, Shivamogga news today, Karnataka ministers in Shivamogga, VIP Arrival Shivamogga #BSSuresh #ShivamoggaHelipad #MalenaduToday #SNChannabasappa #HelicopterLanding #VIPArrival #Bommanakatte #ShivamoggaUpdates
