SHIVAMOGGA NEWS TODAY

ವಿಧಿ ಬರಹ,ಹೀಗೂ ಆಗುತ್ತೆ! ಕುಂಚೇನಹಳ್ಳಿ ಘಟನೆಯಲ್ಲಿ ಓರ್ವ ಸಾವು!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಸಮೀಪದ ಸುತ್ತುಕೋಟೆ ಬಳಿ ನಿನ್ನೆ ದಿನ ಒಂದು ಆಕ್ಸಿಡೆಂಟ್ ಆಗಿದೆ. ಘಟನೆಯಲ್ಲಿ ಬೈಕ್​ ಸವಾರನೊಬ್ಬ ಸ್ಥಳದಲ್ಲಿಯೇ ಬೆಂಕಿಯಿಂದಾಗಿ ಸಾವನ್ನಪ್ಪಿದ್ದಾನೆ. ಅಲ್ಲದೆ ಬೈಕ್​ ಸುಟ್ಟು ಕರಕಲಾಗಿದೆ.

ಕುಂಚೇನಹಳ್ಳಿ ಘಟನೆಯಲ್ಲಿ ಓರ್ವ ಸಾವು

ಖಾಸಗಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ಗೆ ಬೆಂಕಿ ಹೊತ್ತಿಕೊಂಡು, ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿಕಾರಿಪುರದಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರದ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೈಕ್​ ಸವಾರ ಸ್ಪೀಡಾಗಿ ಬಂದು, ನೇರವಾಗಿ ಬಸ್​ನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಬೈಕ್​ ಬಸ್​ನ ಮುಂಬಾಗದಲ್ಲಿ ಸಿಲುಕಿಕೊಂಡಿತಷ್ಟೆ ಅಲ್ಲದೆ, ಕಿಡಿ ಹೊತ್ತಿಕೊಂಡು ಬೈಕ್​ ಧಗಧಗಿಸಿದೆ. ಈ ವೇಳೆ ಅದಾಗಲೇ ಅಪಘಾತದಲ್ಲಿ ಗಾಯಗೊಂಡ ಬೈಕ್​ ಸವಾರನಿಗೆ ಬೆಂಕಿ ಹೊತ್ತಿಕೊಂಡಿದೆ. ಆತ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ. ಬೈಕ್ ಹಿಂಬದಿಯಲ್ಲಿ ಕೂತಿದ್ದವನಿಗೂ ತೀವ್ರ ಪೆಟ್ಟಾಗಿದ್ದು, ಆತನ ಪರಿಸ್ಥಿತಿ ಸೀರಿಯಸ್ ಇದೆ.

ಮೃತನನ್ನು 23 ವರ್ಷದ ಅಬ್ನಾನ್ ಎಂದು ಗುರುಸಿಲಾಗಿದೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ