ಬಾಳೆಬರೇ ಘಾಟಿಯಲ್ಲಿ ಶ್ರೀ ದುರ್ಗಾಂಬ ಬಸ್‌ನಲ್ಲಿ ಬೆಂಕಿ ಅವಘಡ, ಪ್ರಯಾಣಿಕರು ಸೇಫ್​​

ಹಂಚಿಕೊಳ್ಳಿ
WhatsApp Facebook X Telegram
Balebare Ghat Durgamba Bus Catches Fire
Balebare Ghat Durgamba Bus Catches Fire

ಶಿವಮೊಗ್ಗ : ಬಾಳೆಬರೇ ಘಾಟಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

Balebare Ghat ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮಳೆಯ ಶುಭಾರಂಭ! ನಿನ್ನೆ ಹೇಗಿತ್ತು ವರ್ಷದಾರೆ! ವಿವರ ಓದಿ

ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಶ್ರೀ ದುರ್ಗಾಂಬ ಬಸ್ ಶಿವಮೊಗ್ಗ ಮಾರ್ಗವಾಗಿ ಘಾಟಿ ಇಳಿದು ಕುಂದಾಪುರದ ಕಡೆಗೆ ಪ್ರಯಾಣ ಬೆಳೆಸುತ್ತಿತ್ತು. ಈ ಸಂದರ್ಭದಲ್ಲಿ ಏಕಾಏಕಿ ಬಸ್‌ನಲ್ಲಿ  ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್‌ನಲ್ಲಿದ್ದ ಪ್ರಯಾಣಿಕರು ಹೊರಗೆ ಓಡಿಬಂದಿದ್ದಾರೆ. ಅದೃಷ್ಟವಶಾತ್, ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅಗ್ನಿ ಅವಘಡದಲ್ಲಿ ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ ಎಂದು ತಿಳಿದುಬಂದಿದ್ದು,

ಬೆಂಕಿಯ ಜ್ವಾಲೆಗೆ ಬಸ್ ಬಹುತೇಕ ಸುಟ್ಟು ಕರಕಲಾಗಿದ್ದು, ಘಾಟಿ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. 

Balebare Ghat Durgamba Bus Catches Fire

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor